ರಾಜ್ಯ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ಬೆಂಗಳೂರು : ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ.

‌ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ ಇಲಾಖೆಗೆ ಈ-ಮೇಲ್‌ ಮೂಲಕ ಮಾಹಿತಿ ರವಾನಿಸಿದೆ.

ಈ ಹಿನ್ನೆಲೆಯಲ್ಲಿ ಈ ಮೂವರ ಅಮಾನತಿಗೆ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಡಾ. ಚೈತ್ರ, ಡಾ. ಮಂಜಪ್ಪ, ಡಾ. ಅಶೋಕ್‌ ಶೆಲ್ಕೆ ಅವರು ಛತ್ತೀಸ್‌ಗಡ ರವತ್‌ಪುರ ಸರ್ಕಾರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕ್‌ ಸೈನ್ಸ್‌ ಅಂಡ್‌ ರೀಸರ್ಚ್‌ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿಯನ್ನು ನೀಡುವ ಸಂಬಂಧ ಲಂಚ ಪಡೆದಿರುತ್ತಾರೆ. ಇವರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಎಲ್ಲ ವಿಷಯಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮೂವರು ವೈದ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago