ರಾಜ್ಯ

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಮಂದಿ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈಯಲ್ಲಿ ಕಾಫಿ ಕಪ್‌ ಇಟ್ಟುಕೊಂಡಿರುವ ದರ್ಶನ್‌, ಇತರೆ ಮೂವರೊಂದಿಗೆ ಕುಳಿತುಕೊಂಡಿದ್ದರು. ಅವರ ಮತ್ತೊಂದು ಕೈಯಲ್ಲಿ ಸಿಗರೇಟ್‌ ಇರುವುದು ಫೋಟೋದಲ್ಲಿ ಕಾಣಿಸುತ್ತಿತ್ತು.

ಈ ಫೋಟೋ ವೈರಲ್‌ ಆದ ಬೆನ್ನಲ್ಲೇ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಜೈಲರ್‌ ಶರಣಬಸವ ಅಮೀನಗಢ, ಸಹಾಯಕ ಜೈಲರ್‌ ಪುಟ್ಟಸ್ವಾಮಿ, ಜೈಲರ್‌ ಹೆಡ್‌ ವಾರ್ಡನ್‌ಗಳಾದ ವೆಂಕಪ್ಪ, ಸಂಪತ್‌, ವಾರ್ಡನ್‌ ಬಸಪ್ಪ, ಪ್ರಭು, ಶ್ರೀಕಾಂತ್‌ ಸೇರಿದಂತೆ ಏಳು ಮಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ತಿಳಿಸಿದರು.

ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಹಿರಿಯ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…

14 mins ago

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…

41 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…

1 hour ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

2 hours ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

2 hours ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

2 hours ago