ರಾಜ್ಯ

ಡಿಸೆಂಬರ್‌.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್‌

ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.‌13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿಂದು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ಕೃಷಿಗೆ ಸಂಬಂಧಿಸಿದಂತೆ ಘೋಷಣೆ ಮಾಡಿದ್ದ ಯೋಜನೆಗಳನ್ನು ಮರೆತು ಹೋಗಿದೆ. ಬಗರ್‌ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಕಿಡಿಕಾರಿದರು.

ವಕ್ಫ್‌ ಮಂಡಳಿಯ ಆಸ್ತಿಯ ನೆಪದಲ್ಲಿ ರಾಜ್ಯದ ಹಲವಾರು ರೈತರಿಗೆ ನೋಟಿಸ್‌ ನೀಡಲಾಗಿದೆ. ಸರ್ಕಾರದ ಈ ಕ್ರಮದಿಂದ ರೈತರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್.‌13ರಂದು ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago