ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ಕೃಷಿಗೆ ಸಂಬಂಧಿಸಿದಂತೆ ಘೋಷಣೆ ಮಾಡಿದ್ದ ಯೋಜನೆಗಳನ್ನು ಮರೆತು ಹೋಗಿದೆ. ಬಗರ್ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಕಿಡಿಕಾರಿದರು.
ವಕ್ಫ್ ಮಂಡಳಿಯ ಆಸ್ತಿಯ ನೆಪದಲ್ಲಿ ರಾಜ್ಯದ ಹಲವಾರು ರೈತರಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ಈ ಕ್ರಮದಿಂದ ರೈತರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್.13ರಂದು ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…