ರಾಜ್ಯ

ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ ಮಾಹಿತಿ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸದಾಶಿವನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆಯಾಗುತ್ತಿದೆ ಎಂಬ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ,ಈ ವರ್ಷ ಡ್ರಗ್ಸ್‌ ಮಾರಾಟ ಕಡಿಮೆಯಾಗಿದೆ. ಆದರೂ ಮೆಡಿಕಲ್‌ಗಳಲ್ಲಿಯೂ ಸಹ ಸಿಂಥೇಟಿಕ್‌ ಡ್ರಗ್ಸ್‌ ದೊರೆಯುತ್ತಿದೆ ಎಂಬ ಸುದ್ದಿ ನನಗೆ ಆಶ್ಚರ್ಯವಾಗುವಂತೆ ಮಾಡಿದೆ. ಈಗಾಗಲೇ ಕರ್ನಾಟಕದಲ್ಲಿ ಡ್ರಗ್ಸ್‌ ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಡ್ರಗ್ಸ್‌ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ವಿಚಾರದ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಇತರೆ ಡ್ರಗ್ಸ್‌ ನಿಯಂತ್ರಣ ಹಾಗೂ ಗಾಂಜಾದ ಪ್ರಕರಣಗಳು ಕಡಿಮೆ ಆಗಿವೆ. ಈ ಮಧ್ಯೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ಡ್ರಗ್ಸ್‌ಗೆ ಔಷಧ ಎಂದು ಹೇಳಿ ಮಾರಾಟ ಮಾಡಲಾಗುತ್ತಿದೆ. ಡ್ರಗ್ಸ್‌ ಮಾರಾಟಕ್ಕೆ ಔಷಧ ಕೇಂದ್ರಗಳಲ್ಲಿ ಕಾನೂನು ಬೇರೆ ರೀತಿ ಆಗುತ್ತದೆ. ಹೀಗಾಗಿ ಮೆಡಿಕಲ್‌ ಸ್ಟೋರ್‌ಗಳಲ್ಲಿ ಡ್ರಗ್ಸ್‌ ಮಾರಾಟದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಡನೆ ಚರ್ಚೆ ಮಾಡುತ್ತೇವೆ ಎಂದೂ ಸಹ ಇದೇ ವೇಳೆ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

52 seconds ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

54 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago