ಬೆಂಗಳೂರು: ಕರ್ನಾಟಕ ರಾಜ್ಯವು ಲೂಟಿಕೋರರು, ದರೋಡೆಕೋರರ ಸ್ವರ್ಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.21) ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಮಂಗಳೂರು, ಮೈಸೂರಿನಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ರಾಜ್ಯದಲ್ಲಿ ಗೃಹ ಇಲಾಖೆ ಇದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆಯನ್ನು ರಾಜ್ಯದ ಜನರು ಮಾತಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ನಗರ್ತಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಎಂಟೂವರೆ ಕೆ.ಜಿ.ಚಿನ್ನವನ್ನು ಲೂಟಿ ಮಾಡಲಾಗಿದೆ. ನನ್ನ ಅಂಗಡಿಯ ಒಂದೂಕಾಲು ಕೆ.ಜಿ.ಚಿನ್ನವನ್ನು ಹಾಲ್ಮಾರ್ಕ್ ಸೆಂಟರ್ಗೆ ಕೊಟ್ಟಾಗ ಕಳ್ಳತನವಾಗಿದೆ ಎಂದು ಅವರು ಆರೋಪಿಸಿದರು. ಹೀಗಾಗಿ ರಾಜ್ಯದಲ್ಲಿ ಜನರು ಸುರಕ್ಷಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಅಲ್ಲದೇ ಭಯದ ವಾತಾವರಣವಿದ್ದು, ಹೂಡಿಕೆದಾರರು ಸುರಕ್ಷತೆಯ ಪ್ರಶ್ನೆ ಮಾಡುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ ಹೆಸರಲ್ಲಿ ಭಜನೆ ಮಾಡುತ್ತ ಕುರ್ಚಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದ ಜನರಿಗೆ ರಕ್ಷಣೆ ಕೊಡಬೇಕು ಹಾಗೂ ಪೊಲೀಸ್ ಇಲಾಖೆಯನ್ನು ಬಿಗಿಗೊಳಿಸಬೇಕು. ಜೊತೆಗೆ ಅಪರಾಧ ಪ್ರಕರಗಳನ್ನು ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…