ಬೆಂಗಳೂರು: ಕರ್ನಾಟಕ ರಾಜ್ಯವು ಲೂಟಿಕೋರರು, ದರೋಡೆಕೋರರ ಸ್ವರ್ಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.21) ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಮಂಗಳೂರು, ಮೈಸೂರಿನಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ರಾಜ್ಯದಲ್ಲಿ ಗೃಹ ಇಲಾಖೆ ಇದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆಯನ್ನು ರಾಜ್ಯದ ಜನರು ಮಾತಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ನಗರ್ತಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಎಂಟೂವರೆ ಕೆ.ಜಿ.ಚಿನ್ನವನ್ನು ಲೂಟಿ ಮಾಡಲಾಗಿದೆ. ನನ್ನ ಅಂಗಡಿಯ ಒಂದೂಕಾಲು ಕೆ.ಜಿ.ಚಿನ್ನವನ್ನು ಹಾಲ್ಮಾರ್ಕ್ ಸೆಂಟರ್ಗೆ ಕೊಟ್ಟಾಗ ಕಳ್ಳತನವಾಗಿದೆ ಎಂದು ಅವರು ಆರೋಪಿಸಿದರು. ಹೀಗಾಗಿ ರಾಜ್ಯದಲ್ಲಿ ಜನರು ಸುರಕ್ಷಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಅಲ್ಲದೇ ಭಯದ ವಾತಾವರಣವಿದ್ದು, ಹೂಡಿಕೆದಾರರು ಸುರಕ್ಷತೆಯ ಪ್ರಶ್ನೆ ಮಾಡುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ ಹೆಸರಲ್ಲಿ ಭಜನೆ ಮಾಡುತ್ತ ಕುರ್ಚಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದ ಜನರಿಗೆ ರಕ್ಷಣೆ ಕೊಡಬೇಕು ಹಾಗೂ ಪೊಲೀಸ್ ಇಲಾಖೆಯನ್ನು ಬಿಗಿಗೊಳಿಸಬೇಕು. ಜೊತೆಗೆ ಅಪರಾಧ ಪ್ರಕರಗಳನ್ನು ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…