ಬೆಂಗಳೂರು: ಕರ್ನಾಟಕ ರಾಜ್ಯವು ಲೂಟಿಕೋರರು, ದರೋಡೆಕೋರರ ಸ್ವರ್ಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.21) ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಮಂಗಳೂರು, ಮೈಸೂರಿನಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ರಾಜ್ಯದಲ್ಲಿ ಗೃಹ ಇಲಾಖೆ ಇದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆಯನ್ನು ರಾಜ್ಯದ ಜನರು ಮಾತಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ನಗರ್ತಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಎಂಟೂವರೆ ಕೆ.ಜಿ.ಚಿನ್ನವನ್ನು ಲೂಟಿ ಮಾಡಲಾಗಿದೆ. ನನ್ನ ಅಂಗಡಿಯ ಒಂದೂಕಾಲು ಕೆ.ಜಿ.ಚಿನ್ನವನ್ನು ಹಾಲ್ಮಾರ್ಕ್ ಸೆಂಟರ್ಗೆ ಕೊಟ್ಟಾಗ ಕಳ್ಳತನವಾಗಿದೆ ಎಂದು ಅವರು ಆರೋಪಿಸಿದರು. ಹೀಗಾಗಿ ರಾಜ್ಯದಲ್ಲಿ ಜನರು ಸುರಕ್ಷಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಅಲ್ಲದೇ ಭಯದ ವಾತಾವರಣವಿದ್ದು, ಹೂಡಿಕೆದಾರರು ಸುರಕ್ಷತೆಯ ಪ್ರಶ್ನೆ ಮಾಡುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ ಹೆಸರಲ್ಲಿ ಭಜನೆ ಮಾಡುತ್ತ ಕುರ್ಚಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದ ಜನರಿಗೆ ರಕ್ಷಣೆ ಕೊಡಬೇಕು ಹಾಗೂ ಪೊಲೀಸ್ ಇಲಾಖೆಯನ್ನು ಬಿಗಿಗೊಳಿಸಬೇಕು. ಜೊತೆಗೆ ಅಪರಾಧ ಪ್ರಕರಗಳನ್ನು ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…