ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಿ: ಮಾಜಿ ಸಚಿವ ಕಟ್ಟಾ ಸುಬ್ರಹ್ಯಣ್ಯ

ಬೆಂಗಳೂರು: ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ ಜೆಡಿಎಸ್‍ಗೆ ಹೋಗಿದ್ದರು ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಭಿನ್ನಮತೀಯ ನಾಯಕರ ವಿರುದ್ಧ  ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ಕಿಡಿಕಾರಿದರು.

 

ತಮ್ಮ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು,  ಯಡಿಯೂರಪ್ಪ ಅವರನ್ನ ಇಳಿಸಿ ಯಡಿಯೂರಪ್ಪ ಬೇರೆ ಪಕ್ಷ ಮಾಡಿದಾಗ ಬಿಜೆಪಿ ಪಕ್ಷ ನಡೆಸಲು ಆಗಲಿಲ್ಲ. ಪಕ್ಷ ಶಕ್ತಿ ಕಳೆದುಕೊಂಡಿತ್ತು. ಮತ್ತೆ ಯಡಿಯೂರಪ್ಪ ಬಂದರು ಅಧಿಕಾರಕ್ಕೆ ಮತ್ತೆ ಪಕ್ಷ ಬಂತು. ಯಡಿಯೂರಪ್ಪ ಇನ್ನು ಶಕ್ತಿ ಉಳಿಸಿಕೊಂಡಿದ್ದಾರೆ ಎಂದರು.

ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರನ್ನು ಪದಾಧಿಕಾರಿಗಳು ಮಾಡಲು ಸಾಧ್ಯವಿಲ್ಲ. ಪಾರ್ಟಿ ನಿಯಮಾನುಸಾರ ಯಾರನ್ನು ಮಾಡಲು ಸಾಧ್ಯವೋ ಮಾಡುತ್ತಾರೆ. ಕಾಂಗ್ರೆಸ್ ರೀತಿ ದೊಡ್ಡದಾಗಿ ಪದಾಧಿಕಾರಿಗಳು ಮಾಡಲು ಆಗೊಲ್ಲ. ಕೇಂದ್ರದ ಸೂಚನೆ ಪ್ರಕಾರ ಮಾಡಿz?ದÉ?ವೆ ಎಂದರು.

ಶಕ್ತಿ ಇರುವರು ಎಲ್ಲಿz?ದÉ?ನು? ಅವರನ್ನ ಮಾಡಿದರು, ಇವರನ್ನು ಮಾಡಿದರು ಎಂದರೆ ಹೇಗೆ? ಸಮಯ ಅನುಕೂಲ, ಸಂಧರ್ಭದಲ್ಲಿ ಪದಾಧಿಕಾರಿಗಳನ್ನು ಮಾಡುತ್ತಾರೆ. ನಾವು ಪಕ್ಷದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಟಿಕೆಟ್ ಸಿಕ್ಕಿಲ್ಲ. ಆದರೆ ಪಕ್ಷ ಹೇಳಿತು ನಾವು ಪಕ್ಷದ ಕೆಲಸ ಮಾಡಿz?ದÉ?ವೆ. ಇದು ಪಕ್ಷ ನಿಷ್ಠೆ ಎಂದು ಸಮರ್ಥಿಸಿಕೊಂಡರು. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

4 mins ago

ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ…

52 mins ago

ಮುಡಾ ಪ್ರಕರಣ ಸಿವಿಲ್ ಮ್ಯಾಟ್ರೂ ಎಂದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ…

2 hours ago

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ…

2 hours ago

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

2 hours ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

2 hours ago