ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಿ: ಮಾಜಿ ಸಚಿವ ಕಟ್ಟಾ ಸುಬ್ರಹ್ಯಣ್ಯ

ಬೆಂಗಳೂರು: ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ ಜೆಡಿಎಸ್‍ಗೆ ಹೋಗಿದ್ದರು ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಭಿನ್ನಮತೀಯ ನಾಯಕರ ವಿರುದ್ಧ  ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ಕಿಡಿಕಾರಿದರು.

 

ತಮ್ಮ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು,  ಯಡಿಯೂರಪ್ಪ ಅವರನ್ನ ಇಳಿಸಿ ಯಡಿಯೂರಪ್ಪ ಬೇರೆ ಪಕ್ಷ ಮಾಡಿದಾಗ ಬಿಜೆಪಿ ಪಕ್ಷ ನಡೆಸಲು ಆಗಲಿಲ್ಲ. ಪಕ್ಷ ಶಕ್ತಿ ಕಳೆದುಕೊಂಡಿತ್ತು. ಮತ್ತೆ ಯಡಿಯೂರಪ್ಪ ಬಂದರು ಅಧಿಕಾರಕ್ಕೆ ಮತ್ತೆ ಪಕ್ಷ ಬಂತು. ಯಡಿಯೂರಪ್ಪ ಇನ್ನು ಶಕ್ತಿ ಉಳಿಸಿಕೊಂಡಿದ್ದಾರೆ ಎಂದರು.

ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರನ್ನು ಪದಾಧಿಕಾರಿಗಳು ಮಾಡಲು ಸಾಧ್ಯವಿಲ್ಲ. ಪಾರ್ಟಿ ನಿಯಮಾನುಸಾರ ಯಾರನ್ನು ಮಾಡಲು ಸಾಧ್ಯವೋ ಮಾಡುತ್ತಾರೆ. ಕಾಂಗ್ರೆಸ್ ರೀತಿ ದೊಡ್ಡದಾಗಿ ಪದಾಧಿಕಾರಿಗಳು ಮಾಡಲು ಆಗೊಲ್ಲ. ಕೇಂದ್ರದ ಸೂಚನೆ ಪ್ರಕಾರ ಮಾಡಿz?ದÉ?ವೆ ಎಂದರು.

ಶಕ್ತಿ ಇರುವರು ಎಲ್ಲಿz?ದÉ?ನು? ಅವರನ್ನ ಮಾಡಿದರು, ಇವರನ್ನು ಮಾಡಿದರು ಎಂದರೆ ಹೇಗೆ? ಸಮಯ ಅನುಕೂಲ, ಸಂಧರ್ಭದಲ್ಲಿ ಪದಾಧಿಕಾರಿಗಳನ್ನು ಮಾಡುತ್ತಾರೆ. ನಾವು ಪಕ್ಷದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಟಿಕೆಟ್ ಸಿಕ್ಕಿಲ್ಲ. ಆದರೆ ಪಕ್ಷ ಹೇಳಿತು ನಾವು ಪಕ್ಷದ ಕೆಲಸ ಮಾಡಿz?ದÉ?ವೆ. ಇದು ಪಕ್ಷ ನಿಷ್ಠೆ ಎಂದು ಸಮರ್ಥಿಸಿಕೊಂಡರು. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

1 hour ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

2 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

4 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

10 hours ago