ರಾಜ್ಯ

ಕಡಲ ಕೊರೆತಯಾಗದಂತೆ ಎಚ್ಚರವಹಿಸಿ ; ಅಧಿಕಾರಿಗಳಿಗೆ ಸ್ಪೀಕರ್‌ ಯು.ಟಿ ಖಾದರ್‌ ಸಲಹೆ

ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ.

ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್‌ ಅವರು ಚರ್ಚೆ ನಡೆಸಿದರು.

ಪ್ರತಿ ವರ್ಷ ಜೂನ್‌ – ಜುಲೈ ತಿಂಗಳಲ್ಲಿ ಮಳೆಗಾಲ ಜಾಸ್ತಿಯಾಗುತ್ತಿದ್ದು, ಕಡಲ ತೀರದ ಜನರಿಗೆ ಸಮಸ್ಯೆ ಉಂಟಾಗುತ್ತದೆ. ಈ ಭಾರಿ ಮಳೆಗಾಲ ಬರುವುದಕ್ಕೆ ಮುನ್ನ ಕಡಲ ಕೊರೆತ ಆಗದಂತೆ ಎಚ್ಚರವಹಿಸಬೇಕು. ಜೊತೆಗೆ ಸ್ಥಳೀಯ ಜನರಿಗೆ ಅಧಿಕಾರಿಗಳಿಂದ ಜಾಗೃತಿ ಹಾಗೂ ಧೈರ್ಯ ತುಂಬವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸ್ವೀಕರ್‌ ಅವರು ತಿಳಿಸಿದ್ದಾರೆ.

ಕಡಲ ಕೊರತೆಗೆ ಸಂಬಂಧಿಸಿದಂತೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಅದಷ್ಟು ಬೇಗ ಟೆಂಡರ್‌ ಕರೆದು ಕಡಲ ಕೊರೆತ ಸಮಸ್ಯೆಗೆ ಬಗೆಹರಿಸಬೇಕು ಎಂದರು.

ಮಳೆಗಾಲದಲ್ಲಿ ಕಡಲ ಕೊರೆತ ಕ್ರಮತೆಗೆದುಕೊಂಡರೆ ಅದು ಯಶಸ್ವಿಯಾಗುವುದಿಲ್ಲ. ಮಳೆಗಾಲ ಬರುವುದಕ್ಕೂ ಮುನ್ನ ಈ ಬಗ್ಗೆ ಕ್ರಮ ತೆಗೆದುಕೊಂಡು ಮುನ್ನಚ್ಚರಿಕೆ ವಹಿಸಿದರೆ, ಕಡಲ ಕೊರೆತ ಆಗದಂತೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಧಿಕಾರಿಗಳಿಗೆ ಕಿವಿ ಮಾತು ತಿಳಿಸಿದರು.

ಪ್ರತಿ ವರ್ಷ ಮಂಗಳೂರು, ಉಳ್ಳಾಲ, ಮರವಂತಿಕೆ ಬೀಚ್‌ ಗಳಲ್ಲಿ ಕಡಲ ಕೊರೆತ ಜಾಸ್ತಿಯಾಗುತ್ತಿದ್ದು, ಇದಕ್ಕೆ ಅಧಿಕಾರಿಗಳು ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಶ್ವತ ಕಡಲ ಕೊರೆತ ಆಗದಂತೆ ನೋಡಿಕೊಂಡರೆ ಅದಕ್ಕೆ ಸರ್ಕಾರ ವತಿಯಿಂದ ಏನೇಲ್ಲ ಸಹಾಯ ಬೇಕು ಅದೇಲ್ಲ ಸಹಕಾರ ನೀಡುತ್ತೇನೆ. ಜೊತೆಗೆ ಈ ಬಗ್ಗೆ ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಇನ್ನಿತರ ಬಂದರು ಪ್ರದೇಶಗಳಲ್ಲಿ ಸಭೆ ನಡೆಸಿ, ಅಧಿಕಾರಿಗಳಿಗೆ ಈ ಬಗ್ಗೆ ಎಚ್ಚರವಹಿಸುವಂತೆ ತಿಳಿಸುತ್ತೇನೆ ಎಂದರು.

ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಚಂದ್ರ ಹೆಚ್.ಸಿ, ಮುಖ್ಯ ಇಂಜಿನಿಯರ್‌ ದಿವಕಾರ್‌, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದರು.

3 ಜಿಲ್ಲೆಗೆ 200 ಕೋಟಿ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಮುದ್ರ ಕಡಲ ಕೊರೆತ ತಡೆಗಟ್ಟುವ ಸಂಬಂಧ ಉಡುಪಿ ಜಿಲ್ಲೆಯಿಂದ 115 ಕೋಟಿ ರೂ. ಉತ್ತರ ಕನ್ನಡ ಜಿಲ್ಲೆಗೆ 150 ಕೋಟಿ ರೂ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ 125 ಕೋಟಿ ಒಟ್ಟು 390 ಕೋಟಿ ರೂ. ಕ್ರಿಯಾ ಯೋಜನೆ ಸಿದ್ದಪಡಿಸಿ, ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ರಾಜ್ಯ ಸರ್ಕಾರದ 2025-26 ನೇ ಸಾಲಿನ ಅಯವ್ಯಯದಂತೆ 3 ಜಿಲ್ಲೆಗಳಲ್ಲಿ ಒಟ್ಟಾರೆ 200 ಕೋಟಿ ರೂ. ಮಿತಿಗೊಳಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago