ರಾಜ್ಯ

ಕಡಲ ಕೊರೆತಯಾಗದಂತೆ ಎಚ್ಚರವಹಿಸಿ ; ಅಧಿಕಾರಿಗಳಿಗೆ ಸ್ಪೀಕರ್‌ ಯು.ಟಿ ಖಾದರ್‌ ಸಲಹೆ

ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ.

ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್‌ ಅವರು ಚರ್ಚೆ ನಡೆಸಿದರು.

ಪ್ರತಿ ವರ್ಷ ಜೂನ್‌ – ಜುಲೈ ತಿಂಗಳಲ್ಲಿ ಮಳೆಗಾಲ ಜಾಸ್ತಿಯಾಗುತ್ತಿದ್ದು, ಕಡಲ ತೀರದ ಜನರಿಗೆ ಸಮಸ್ಯೆ ಉಂಟಾಗುತ್ತದೆ. ಈ ಭಾರಿ ಮಳೆಗಾಲ ಬರುವುದಕ್ಕೆ ಮುನ್ನ ಕಡಲ ಕೊರೆತ ಆಗದಂತೆ ಎಚ್ಚರವಹಿಸಬೇಕು. ಜೊತೆಗೆ ಸ್ಥಳೀಯ ಜನರಿಗೆ ಅಧಿಕಾರಿಗಳಿಂದ ಜಾಗೃತಿ ಹಾಗೂ ಧೈರ್ಯ ತುಂಬವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸ್ವೀಕರ್‌ ಅವರು ತಿಳಿಸಿದ್ದಾರೆ.

ಕಡಲ ಕೊರತೆಗೆ ಸಂಬಂಧಿಸಿದಂತೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಅದಷ್ಟು ಬೇಗ ಟೆಂಡರ್‌ ಕರೆದು ಕಡಲ ಕೊರೆತ ಸಮಸ್ಯೆಗೆ ಬಗೆಹರಿಸಬೇಕು ಎಂದರು.

ಮಳೆಗಾಲದಲ್ಲಿ ಕಡಲ ಕೊರೆತ ಕ್ರಮತೆಗೆದುಕೊಂಡರೆ ಅದು ಯಶಸ್ವಿಯಾಗುವುದಿಲ್ಲ. ಮಳೆಗಾಲ ಬರುವುದಕ್ಕೂ ಮುನ್ನ ಈ ಬಗ್ಗೆ ಕ್ರಮ ತೆಗೆದುಕೊಂಡು ಮುನ್ನಚ್ಚರಿಕೆ ವಹಿಸಿದರೆ, ಕಡಲ ಕೊರೆತ ಆಗದಂತೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಧಿಕಾರಿಗಳಿಗೆ ಕಿವಿ ಮಾತು ತಿಳಿಸಿದರು.

ಪ್ರತಿ ವರ್ಷ ಮಂಗಳೂರು, ಉಳ್ಳಾಲ, ಮರವಂತಿಕೆ ಬೀಚ್‌ ಗಳಲ್ಲಿ ಕಡಲ ಕೊರೆತ ಜಾಸ್ತಿಯಾಗುತ್ತಿದ್ದು, ಇದಕ್ಕೆ ಅಧಿಕಾರಿಗಳು ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಶ್ವತ ಕಡಲ ಕೊರೆತ ಆಗದಂತೆ ನೋಡಿಕೊಂಡರೆ ಅದಕ್ಕೆ ಸರ್ಕಾರ ವತಿಯಿಂದ ಏನೇಲ್ಲ ಸಹಾಯ ಬೇಕು ಅದೇಲ್ಲ ಸಹಕಾರ ನೀಡುತ್ತೇನೆ. ಜೊತೆಗೆ ಈ ಬಗ್ಗೆ ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಇನ್ನಿತರ ಬಂದರು ಪ್ರದೇಶಗಳಲ್ಲಿ ಸಭೆ ನಡೆಸಿ, ಅಧಿಕಾರಿಗಳಿಗೆ ಈ ಬಗ್ಗೆ ಎಚ್ಚರವಹಿಸುವಂತೆ ತಿಳಿಸುತ್ತೇನೆ ಎಂದರು.

ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಚಂದ್ರ ಹೆಚ್.ಸಿ, ಮುಖ್ಯ ಇಂಜಿನಿಯರ್‌ ದಿವಕಾರ್‌, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದರು.

3 ಜಿಲ್ಲೆಗೆ 200 ಕೋಟಿ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಮುದ್ರ ಕಡಲ ಕೊರೆತ ತಡೆಗಟ್ಟುವ ಸಂಬಂಧ ಉಡುಪಿ ಜಿಲ್ಲೆಯಿಂದ 115 ಕೋಟಿ ರೂ. ಉತ್ತರ ಕನ್ನಡ ಜಿಲ್ಲೆಗೆ 150 ಕೋಟಿ ರೂ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ 125 ಕೋಟಿ ಒಟ್ಟು 390 ಕೋಟಿ ರೂ. ಕ್ರಿಯಾ ಯೋಜನೆ ಸಿದ್ದಪಡಿಸಿ, ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ರಾಜ್ಯ ಸರ್ಕಾರದ 2025-26 ನೇ ಸಾಲಿನ ಅಯವ್ಯಯದಂತೆ 3 ಜಿಲ್ಲೆಗಳಲ್ಲಿ ಒಟ್ಟಾರೆ 200 ಕೋಟಿ ರೂ. ಮಿತಿಗೊಳಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago