ರಾಜ್ಯ

ಚನ್ನಪಟ್ಟಣ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರಾಮನಗರ: ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿಯನ್ನು ಕಿತ್ತು ಹಾಕಲು ಹತ್ತು ಜನ್ಮ ಎತ್ತಿ ಬಂದರೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯ ಸೋಲಿನ ಹೊಣೆ ಕಾರ್ಯಕರ್ತರು, ಮುಖಂಡರದ್ದಲ್ಲ. ಈ ಸೋಲಿನ ಜವಾಬ್ದಾರಿಯನ್ನು ನಾನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮನ್ನು ಟೂರಿಂಗ್‌ ಟಾಕೀಸ್‌ ಅಂತಾರೆ. ರಾಜ್ಯದಲ್ಲಿ ಯಾವುದೇ ಕಡೆ ನಿಂತು ಗೆದ್ದು ಬರುವ ಶಕ್ತಿ ಇದ್ರೆ ಅದು ದೇವೇಗೌಡರ ಕುಟುಂಬಕ್ಕೆ ಮಾತ್ರ. ಈ ಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧೆ ಅನಿರೀಕ್ಷಿತ. ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡಿಕೊಂಡು ಅಧಿಕಾರಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಹಾಸನದಲ್ಲಿ ಕಾಂಗ್ರೆಸ್‌ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಈಗ ಯಾವುದೋ ಸಿದ್ದರಾಮೋತ್ಸವ ಮಾಡ್ತಾರಂತೆ. ಯಾವ ಉದ್ದೇಶಕ್ಕೆ ಮಾಡ್ತಿದ್ದೀರಿ. ಏನು ಸಂದೇಶ ಕೊಡೋಕೆ ಅಹಿಂದ ಸಮಾವೇಶ ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.

ಇನ್ನು ನಾನು ಮಂಡ್ಯದಲ್ಲಿ ಗೆಲ್ಲಲು ಒಕ್ಕಲಿಗ ಸಮುದಾಯ ಕಾರಣ. ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿ ಕಿತ್ತು ಹಾಕಲು ಇನ್ನೂ ಹತ್ತು ಜನ್ಮ ಎತ್ತಿ ಬಂದರೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ಕೊಟ್ಟರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

14 mins ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ನಿರ್ಮಿಸಿ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…

19 mins ago

ಓದುಗರ ಪತ್ರ:  ವಿಮಾ ವಲಯದಲ್ಲಿ ಶೇ.೧೦೦ ಎಫ್ಡಿಐ ಜನ ವಿರೋಧಿ

ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…

48 mins ago

ಓದುಗರ ಪತ್ರ: ಸಜ್ಜನ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…

54 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಂಚೆ ಚೀಟಿ ಮೂಲಕ ಟಿಪ್ಪು ಸುಲ್ತಾನ್ ವಂಶಸ್ಥೆಯನು ಗೌರವಿಸಿದ ಫ್ರಾನ್ಸ್‌

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ…

1 hour ago

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…

2 hours ago