ರಾಜ್ಯ

ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ ಅವರು, ಪ್ರಸ್ತುತ ಇಲಾಖೆಗೆ 1864 ಕೋಟಿ ರೂ ಅನುದಾನ ನೀಡಿದ್ದು, ಇದುವರೆಗೆ 1235 ಕೋಟಿ ರೂ ವೆಚ್ಚವಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕಾಗಿ 100 ಕೋಟಿ ರೂ ಒದಗಿಸಲಾಗಿದ್ದು ಆದಷ್ಟು ಬೇಗನೆ ಅದನ್ನು ಪೂರ್ಣಗೊಳಿಸಬೇಕು. ಜೊತೆಗೆ ಐಟಿಐ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೌಶಲ್ಯವಿದ್ದರೆ ಮಾತ್ರ ಉದ್ಯೋಗ ಸಿಗಲು ಸಾದ್ಯ. ಕೌಶಲ್ಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಜಾರಿ ಮಾಡಬೇಕು. ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರಲ್ಲಿ 1,61,883 ಅರ್ಹ ಫಲಾನುಭವಿಗಳಿಗೆ 216 ಕೋಟಿ ರೂ ನಿರುದ್ಯೋಗ ಭತ್ಯೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಸುಮಾರು 20,000 ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಹಾಗೂ ಕಮ್ಯೂನಿಕೇಶನ್‌ ತರಬೇತಿ ನೀಡುವ ಕಾರ್ಯಕ್ರಮವನ್ನು ಬೇಗ ಅನುಷ್ಠಾನಗೊಳಿಸಬೇಕು. ರಾಜ್ಯದಲ್ಲಿ ಅಕ್ಕ ಕಾಫಿ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟಿನ್‌ಗಳನ್ನು ಮಹಿಳಾ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

4 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

6 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

7 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

8 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

10 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago