ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು
ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಇದು ರಾಕ್ಷಸೀ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ. ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನನ್ನಬೇಕು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ ಕ್ರಮ ತಗೋಬೇಕು. ಅವರ ಬೆಣ್ಣೆ ಮಾತು ಇಲ್ಲಿ ನಡೆಯಲ್ಲ. ನಿಮ್ಮ ಡಿನ್ನರ್ ಮೀಟಿಂಗ್ ನಿಲ್ಸಿ, ಆಡಳಿತ ಸರಿ ಮಾಡೋದನ್ನು ನೋಡಿ. ಈ ಪ್ರಕರಣದ ಬಗೆ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇವರ ಸರಕಾರದ ಅವಧಿಯಲ್ಲಿ ರಾಕ್ಷಸೀ ಕೃತ್ಯ ಮೆರೆಯುವ ಇಂಥ ಜನರನ್ನು ಹೆಚ್ಚೆಚ್ಚು ಸೃಷ್ಟಿ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…