cm siddaramiha
ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…