cm siddaramiha
ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…