Minister Eshwar Khandre
ಬೆಂಗಳೂರು : ಹುಲಿ ದಾಳಿ ನಡೆದಿರುವ ಸ್ಥಳಕ್ಕೆ ಕೂಡಲೇ ಧಾವಿಸಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯ ಸೆರೆಗೆ ತುರ್ತು ಕ್ರಮ ವಹಿಸಲು ಅಗತ್ಯ ಕ್ರಮಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಹುಲಿ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿರುವ ಕುರಿತು ಮಾಹಿತಿ ತಿಳಿದ ತಕ್ಷಣವೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಹುಲಿ ಸೆರೆಗೆ ಬೇಕಾದ ಕ್ರಮಜರುಗಿಸುವಂತೆ ಆದೇಶ ನೀಡಿದ್ದಾರೆ.
ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳನ್ನ ತರೆಟೆಗೆ ತೆಗೆದುಕೊಂಡ ಶಾಸಕ ಅನಿಲ್ ಚಿಕ್ಕಮಾದು
ಮೈಸೂರು ಜಿಲ್ಲೆ ಸರಗೂರು ತಾಲೂಕು ಮುಳ್ಳೂರು ಬಳಿ ಬೆಣ್ಣೆಗೆರೆ ಗ್ರಾಮದ ಅರಣ್ಯದ ಬಳಿ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಹುಲಿ ದಾಳಿ ಹೆಚ್ಚುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಿಗೆ ದನ ಮೇಯಿಸಲು ಹೋಗುವವರು, ಕಾಡಿನಂಚಿನ ಗ್ರಾಮಗಳ ನಿವಾಸಿಗಳು ಮತ್ತು ತೋಟದ ಕೆಲಸಗಾರರು ಹುಲಿ, ಚಿರತೆ, ಆನೆ ಇತ್ಯಾದಿ ವನ್ಯಜೀವಿಗಳ ಸಂಚಾರದ ಮಾಹಿತಿ ಇದ್ದಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. ದನ ಮೇಯಿಸಲು ರಾಜಶೇಖರ (೫೪) ಎಂಬುವವರು ತೆರಳಿದ್ದ ವೇಳೆ ಹುಲಿ ದಾಳಿ ಮಾಡಿದೆ ಎನ್ನಲಾಗಿದ್ದು, ಇದೊಂದು ತೀವ್ರ ನೋವಿನ ಸಂಗತಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಸೂಚಿಸಿರುವುದಾಗಿಯೂ ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…