ರಾಜ್ಯ

ಹುಲಿ ಸೆರೆಗೆ ತುರ್ತು ಕ್ರಮ ವಹಿಸಿ : ಅಧಿಕಾರಿಗಳಿಗೆ ಖಂಡ್ರೆ ಸೂಚನೆ

ಬೆಂಗಳೂರು : ಹುಲಿ ದಾಳಿ ನಡೆದಿರುವ ಸ್ಥಳಕ್ಕೆ ಕೂಡಲೇ ಧಾವಿಸಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯ ಸೆರೆಗೆ ತುರ್ತು ಕ್ರಮ ವಹಿಸಲು ಅಗತ್ಯ ಕ್ರಮಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಹುಲಿ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿರುವ ಕುರಿತು ಮಾಹಿತಿ ತಿಳಿದ ತಕ್ಷಣವೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಹುಲಿ ಸೆರೆಗೆ ಬೇಕಾದ ಕ್ರಮಜರುಗಿಸುವಂತೆ ಆದೇಶ ನೀಡಿದ್ದಾರೆ.

ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳನ್ನ ತರೆಟೆಗೆ ತೆಗೆದುಕೊಂಡ ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು ಜಿಲ್ಲೆ ಸರಗೂರು ತಾಲೂಕು ಮುಳ್ಳೂರು ಬಳಿ ಬೆಣ್ಣೆಗೆರೆ ಗ್ರಾಮದ ಅರಣ್ಯದ ಬಳಿ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಹುಲಿ ದಾಳಿ ಹೆಚ್ಚುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಿಗೆ ದನ ಮೇಯಿಸಲು ಹೋಗುವವರು, ಕಾಡಿನಂಚಿನ ಗ್ರಾಮಗಳ ನಿವಾಸಿಗಳು ಮತ್ತು ತೋಟದ ಕೆಲಸಗಾರರು ಹುಲಿ, ಚಿರತೆ, ಆನೆ ಇತ್ಯಾದಿ ವನ್ಯಜೀವಿಗಳ ಸಂಚಾರದ ಮಾಹಿತಿ ಇದ್ದಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. ದನ ಮೇಯಿಸಲು ರಾಜಶೇಖರ (೫೪) ಎಂಬುವವರು ತೆರಳಿದ್ದ ವೇಳೆ ಹುಲಿ ದಾಳಿ ಮಾಡಿದೆ ಎನ್ನಲಾಗಿದ್ದು, ಇದೊಂದು ತೀವ್ರ ನೋವಿನ ಸಂಗತಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಸೂಚಿಸಿರುವುದಾಗಿಯೂ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

6 mins ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

39 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

2 hours ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago