Minister Eshwar Khandre
ಬೆಂಗಳೂರು : ಹುಲಿ ದಾಳಿ ನಡೆದಿರುವ ಸ್ಥಳಕ್ಕೆ ಕೂಡಲೇ ಧಾವಿಸಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯ ಸೆರೆಗೆ ತುರ್ತು ಕ್ರಮ ವಹಿಸಲು ಅಗತ್ಯ ಕ್ರಮಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಹುಲಿ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿರುವ ಕುರಿತು ಮಾಹಿತಿ ತಿಳಿದ ತಕ್ಷಣವೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಹುಲಿ ಸೆರೆಗೆ ಬೇಕಾದ ಕ್ರಮಜರುಗಿಸುವಂತೆ ಆದೇಶ ನೀಡಿದ್ದಾರೆ.
ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳನ್ನ ತರೆಟೆಗೆ ತೆಗೆದುಕೊಂಡ ಶಾಸಕ ಅನಿಲ್ ಚಿಕ್ಕಮಾದು
ಮೈಸೂರು ಜಿಲ್ಲೆ ಸರಗೂರು ತಾಲೂಕು ಮುಳ್ಳೂರು ಬಳಿ ಬೆಣ್ಣೆಗೆರೆ ಗ್ರಾಮದ ಅರಣ್ಯದ ಬಳಿ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಹುಲಿ ದಾಳಿ ಹೆಚ್ಚುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಿಗೆ ದನ ಮೇಯಿಸಲು ಹೋಗುವವರು, ಕಾಡಿನಂಚಿನ ಗ್ರಾಮಗಳ ನಿವಾಸಿಗಳು ಮತ್ತು ತೋಟದ ಕೆಲಸಗಾರರು ಹುಲಿ, ಚಿರತೆ, ಆನೆ ಇತ್ಯಾದಿ ವನ್ಯಜೀವಿಗಳ ಸಂಚಾರದ ಮಾಹಿತಿ ಇದ್ದಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. ದನ ಮೇಯಿಸಲು ರಾಜಶೇಖರ (೫೪) ಎಂಬುವವರು ತೆರಳಿದ್ದ ವೇಳೆ ಹುಲಿ ದಾಳಿ ಮಾಡಿದೆ ಎನ್ನಲಾಗಿದ್ದು, ಇದೊಂದು ತೀವ್ರ ನೋವಿನ ಸಂಗತಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಸೂಚಿಸಿರುವುದಾಗಿಯೂ ತಿಳಿಸಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…