ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ ಜನತೆ ಬೆಂಬಲ ನೀಡುತ್ತಾರೆ ಎಂಬುದು ದೆಹಲಿಯ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ತಿಳಿಸಿದರು.
ದೇಶದ ಹಿತ ಮರೆತು ವಿದೇಶದಲ್ಲಿ ಮಾತನಾಡುವವರು ಚುನಾವಣೆಯಲ್ಲಿ ಸೋತಾಗ, ತಮ್ಮ ಸೋಲನ್ನು ಒಪ್ಪಿಕೊಳ್ಳದವರು ಇವಿಎಂ ಲೋಪದೋಷದ ಬಗ್ಗೆ ಮಾತನಾಡುತ್ತಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
ರಾಜ್ಯ ಬಿಜೆಪಿಯ ಗೊಂದಲ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಹೈಕಮಾಂಡ್ ಬಹಳ ಗಟ್ಟಿ ಇದೆ. ಚುನಾವಣೆಯ ನಂತರ ರಾಷ್ಟ್ರ ನಾಯಕರು ಪಕ್ಷ ಸಂಘಟನೆಗೆ ಸಮಯ ನೀಡುತ್ತಾರೆ. ಆ ವೇಳೆ ಕರ್ನಾಟಕದ ಬಿಜೆಪಿ ನಾಯಕರ ಗೊಂದಲ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ ಹೆಸರನ್ನು ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾರ ಹೆಸರನ್ನು ಸೂಚಿಸಿಲ್ಲ. ಏನೇ ಇದ್ದರೂ ಈ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…