ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ ಜನತೆ ಬೆಂಬಲ ನೀಡುತ್ತಾರೆ ಎಂಬುದು ದೆಹಲಿಯ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ತಿಳಿಸಿದರು.
ದೇಶದ ಹಿತ ಮರೆತು ವಿದೇಶದಲ್ಲಿ ಮಾತನಾಡುವವರು ಚುನಾವಣೆಯಲ್ಲಿ ಸೋತಾಗ, ತಮ್ಮ ಸೋಲನ್ನು ಒಪ್ಪಿಕೊಳ್ಳದವರು ಇವಿಎಂ ಲೋಪದೋಷದ ಬಗ್ಗೆ ಮಾತನಾಡುತ್ತಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
ರಾಜ್ಯ ಬಿಜೆಪಿಯ ಗೊಂದಲ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಹೈಕಮಾಂಡ್ ಬಹಳ ಗಟ್ಟಿ ಇದೆ. ಚುನಾವಣೆಯ ನಂತರ ರಾಷ್ಟ್ರ ನಾಯಕರು ಪಕ್ಷ ಸಂಘಟನೆಗೆ ಸಮಯ ನೀಡುತ್ತಾರೆ. ಆ ವೇಳೆ ಕರ್ನಾಟಕದ ಬಿಜೆಪಿ ನಾಯಕರ ಗೊಂದಲ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ ಹೆಸರನ್ನು ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾರ ಹೆಸರನ್ನು ಸೂಚಿಸಿಲ್ಲ. ಏನೇ ಇದ್ದರೂ ಈ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…