ರಾಜ್ಯ

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್‌ ಆಗ್ಬಿಟ್ಟಿದೆ: ಬೊಮ್ಮಾಯಿ

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್‌ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ ಜನತೆ ಬೆಂಬಲ ನೀಡುತ್ತಾರೆ ಎಂಬುದು ದೆಹಲಿಯ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ತಿಳಿಸಿದರು.

ದೇಶದ ಹಿತ ಮರೆತು ವಿದೇಶದಲ್ಲಿ ಮಾತನಾಡುವವರು ಚುನಾವಣೆಯಲ್ಲಿ ಸೋತಾಗ, ತಮ್ಮ ಸೋಲನ್ನು ಒಪ್ಪಿಕೊಳ್ಳದವರು ಇವಿಎಂ ಲೋಪದೋಷದ ಬಗ್ಗೆ ಮಾತನಾಡುತ್ತಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.

ರಾಜ್ಯ ಬಿಜೆಪಿಯ ಗೊಂದಲ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಹೈಕಮಾಂಡ್‌ ಬಹಳ ಗಟ್ಟಿ ಇದೆ. ಚುನಾವಣೆಯ ನಂತರ ರಾಷ್ಟ್ರ ನಾಯಕರು ಪಕ್ಷ ಸಂಘಟನೆಗೆ ಸಮಯ ನೀಡುತ್ತಾರೆ. ಆ ವೇಳೆ ಕರ್ನಾಟಕದ ಬಿಜೆಪಿ ನಾಯಕರ ಗೊಂದಲ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ ಹೆಸರನ್ನು ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾರ ಹೆಸರನ್ನು ಸೂಚಿಸಿಲ್ಲ. ಏನೇ ಇದ್ದರೂ ಈ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago