ರಾಜ್ಯ

ಕೆಎಸ್‌ಡಿಎಲ್‌ ಹೊಸ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮ್ಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎರಡು ವರ್ಷಗಳ ಅವಧಿಗೆ ತಮನ್ನಾ ಅವರಿಗೆ 6.20 ಕೋಟಿ ರೂ.ಗಳ ಸಂಭಾವನೆ ನೀಡಲಿದೆ.

ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯುವ ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯನ್ನಾಗಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ.

ಮೈಸೂರು ಸ್ಯಾಂಡಲ್ ಸೋಪ್, ಶತಮಾನಗಳ ಇತಿಹಾಸವಿರುವ ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿದೆ. ಇಂತಹ ಉತ್ಪನ್ನಕ್ಕೆ ಕನ್ನಡದ ನೆಲದ ಕಲಾವಿದರಾದ ಡಾ. ಶಿವರಾಜ್‌ಕುಮಾರ್, ಸುದೀಪ್, ಪುನೀತ್ ರಾಜ್‌ಕುಮಾ‌ರ್ ಸೇರಿದಂತೆ ಹಲವು ದಿಗ್ಗಜರು ಜಾಹೀರಾತು ರಾಯಭಾರಿಗಳಾಗಿದ್ದರು. ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್‌ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ, ಇದನ್ನು ಗಮನಿಸಿ ಮಾರುಕಟ್ಟೆ ಬ್ರಾಂಡಿಂಗ್ ಲೆಕ್ಕಾಚಾರ ಹಾಕಿ ಅವರನ್ನು ರಾಯಭಾರಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಸರ್ಕಾರದ ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನೆರೆ ರಾಜ್ಯದ ನಟಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ನೀಡಿ ರಾಯಭಾರಿಯನ್ನಾಗಿ ನೇಮಿಸಿರುವುದಕ್ಕೆ ಹಲವು ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಅನ್ಯ ರಾಜ್ಯದ ನಟಿಯ ನೇಮಕದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

5 mins ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

20 mins ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

46 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

1 hour ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

2 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago