ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎರಡು ವರ್ಷಗಳ ಅವಧಿಗೆ ತಮನ್ನಾ ಅವರಿಗೆ 6.20 ಕೋಟಿ ರೂ.ಗಳ ಸಂಭಾವನೆ ನೀಡಲಿದೆ.
ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯುವ ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್ಗೆ ಹೊಸ ರಾಯಭಾರಿಯನ್ನಾಗಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ.
ಮೈಸೂರು ಸ್ಯಾಂಡಲ್ ಸೋಪ್, ಶತಮಾನಗಳ ಇತಿಹಾಸವಿರುವ ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿದೆ. ಇಂತಹ ಉತ್ಪನ್ನಕ್ಕೆ ಕನ್ನಡದ ನೆಲದ ಕಲಾವಿದರಾದ ಡಾ. ಶಿವರಾಜ್ಕುಮಾರ್, ಸುದೀಪ್, ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವು ದಿಗ್ಗಜರು ಜಾಹೀರಾತು ರಾಯಭಾರಿಗಳಾಗಿದ್ದರು. ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ, ಇದನ್ನು ಗಮನಿಸಿ ಮಾರುಕಟ್ಟೆ ಬ್ರಾಂಡಿಂಗ್ ಲೆಕ್ಕಾಚಾರ ಹಾಕಿ ಅವರನ್ನು ರಾಯಭಾರಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಸರ್ಕಾರದ ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನೆರೆ ರಾಜ್ಯದ ನಟಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ನೀಡಿ ರಾಯಭಾರಿಯನ್ನಾಗಿ ನೇಮಿಸಿರುವುದಕ್ಕೆ ಹಲವು ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಅನ್ಯ ರಾಜ್ಯದ ನಟಿಯ ನೇಮಕದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…