ಬೆಂಗಳೂರು: ಕೆಎಸ್ಡಿಎಲ್ ನೂತನ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್ಡಿಎಲ್ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.
ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಆಕ್ಷೇಪಾರ್ಹವಾಗಿದೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಬಾಲಿವುಡ್ ನಟಿಗೆ ಅವಕಾಶ ನೀಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…