ಬೆಂಗಳೂರು: ಕೆಎಸ್ಡಿಎಲ್ ನೂತನ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್ಡಿಎಲ್ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.
ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಆಕ್ಷೇಪಾರ್ಹವಾಗಿದೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಬಾಲಿವುಡ್ ನಟಿಗೆ ಅವಕಾಶ ನೀಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…