ರಾಜ್ಯ

ಕೆಎಸ್‌ಡಿಎಲ್‌ ರಾಯಭಾರಿಯಾಗಿ ತಮನ್ನಾ ಆಯ್ಕೆ: ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೆಎಸ್‌ಡಿಎಲ್‌ ನೂತನ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಎಸ್‌ಡಿಎಲ್‌ನ ಬ್ರಾಂಡ್‌ ಅಂಬಾಸಿಡರ್‌ ಆಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.

ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್‌ ಅಂಬಾಸಿಡರ್‌ ಆಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಆಕ್ಷೇಪಾರ್ಹವಾಗಿದೆ.

ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಬಾಲಿವುಡ್‌ ನಟಿಗೆ ಅವಕಾಶ ನೀಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

59 mins ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

2 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

3 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

3 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

5 hours ago