ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಟ ವಿಜಯ್ ಅವರ ಅಭಿಮಾನಿ ಅಡುಗೆ ತಯಾರಕರಾದ ನಾಗರಾಜು ಮಾತನಾಡಿ, ಕಳೆದ ತಿಂಗಳು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಮುಖ್ಯಮಂತ್ರಿ ಆಗಲು ಬಹುಮತದ ಕೊರತೆ ಇದ್ದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಐದು ದಿನಗಳು ನಿರಂತರ ವಿವಿಧ ಪಕ್ಷಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಅವರ ಬೆಂಬಲ ಪಡೆದು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಸಿನಿಮಾರಂಗದಲ್ಲಿ ಜನ ಮನ್ನಣೆ ಗಳಿಸಿದಂತೆ ರಾಜಕೀಯದಲ್ಲಿಯೂ ಜನ ನಾಯಕರಾಗಿ ದೇಶದಲ್ಲಿಯೇ ಮಾದರಿ ಸಿಎಂ ಆಗಲಿ ಎಂದು ಶುಭ ಕೋರಿದರು.
ಹೂವಿನ ಅಂಗಡಿ ಮಾಲೀಕ ಮಹೇಶ್ ಮಾತನಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ನಟ ವಿಜಯ್ ರವರು ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆ ವಿವಿಧ ಪಕ್ಷಗಳು ಅವರಿಗೆ ಬೆಂಬಲವಾಗಿ ನಿಂತು ಸಹಕಾರ ನೀಡಿದ್ದಾರೆ. ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಮುಂದುವರಿಸಲಿ ಎಂದರು.
ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಟ ವಿಜಯ್ ರವರು ನಾನು ಯಾವುದೇ ತಪ್ಪು ಮಾಡೋದಿಲ್ಲ ನನ್ನ ಸಚಿವ ಸಂಪುಟದ ಯಾವ ಸಚಿವರು ಶಾಸಕರು ಜನರ ಭಾವನೆಗಳಿಗೆ ಧಕ್ಕೆ ಆಗದಂತೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಾದಂತೆ ಸೂಚನೆ ನೀಡಲಾಗಿದೆ. ಯಾವುದೇ ಸಚಿವರು ಶಾಸಕರು ತಪ್ಪು ಮಾಡಿದರೆ ಅಂತಹ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ತಿಳಿಸಿರುವುದು ಸಂತಸದ ವಿಚಾರ ಎಂದರು.
ಇದೇ ವೇಳೆ ನಟ ವಿಜಯ್ ಅಭಿಮಾನಿಗಳಾದ ಗಂಗಾಧರ್ ಬಸವೇಗೌಡ ಮಹೇಶ್, ಚೇತನ್, ವಿಶ್ವ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…