ರಾಜ್ಯ

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ನಟ ವಿಜಯ್ ಅವರ ಅಭಿಮಾನಿ ಅಡುಗೆ ತಯಾರಕರಾದ ನಾಗರಾಜು ಮಾತನಾಡಿ, ಕಳೆದ ತಿಂಗಳು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಮುಖ್ಯಮಂತ್ರಿ ಆಗಲು ಬಹುಮತದ ಕೊರತೆ ಇದ್ದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಐದು ದಿನಗಳು ನಿರಂತರ ವಿವಿಧ ಪಕ್ಷಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಅವರ ಬೆಂಬಲ ಪಡೆದು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಸಿನಿಮಾರಂಗದಲ್ಲಿ ಜನ ಮನ್ನಣೆ ಗಳಿಸಿದಂತೆ ರಾಜಕೀಯದಲ್ಲಿಯೂ ಜನ ನಾಯಕರಾಗಿ ದೇಶದಲ್ಲಿಯೇ ಮಾದರಿ ಸಿಎಂ ಆಗಲಿ ಎಂದು ಶುಭ ಕೋರಿದರು.

ಹೂವಿನ ಅಂಗಡಿ ಮಾಲೀಕ ಮಹೇಶ್ ಮಾತನಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ನಟ ವಿಜಯ್ ರವರು ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆ ವಿವಿಧ ಪಕ್ಷಗಳು ಅವರಿಗೆ ಬೆಂಬಲವಾಗಿ ನಿಂತು ಸಹಕಾರ ನೀಡಿದ್ದಾರೆ. ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಮುಂದುವರಿಸಲಿ ಎಂದರು.

ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಟ ವಿಜಯ್ ರವರು ನಾನು ಯಾವುದೇ ತಪ್ಪು ಮಾಡೋದಿಲ್ಲ ನನ್ನ ಸಚಿವ ಸಂಪುಟದ ಯಾವ ಸಚಿವರು ಶಾಸಕರು ಜನರ ಭಾವನೆಗಳಿಗೆ ಧಕ್ಕೆ ಆಗದಂತೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಾದಂತೆ ಸೂಚನೆ ನೀಡಲಾಗಿದೆ. ಯಾವುದೇ ಸಚಿವರು ಶಾಸಕರು ತಪ್ಪು ಮಾಡಿದರೆ ಅಂತಹ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ತಿಳಿಸಿರುವುದು ಸಂತಸದ ವಿಚಾರ ಎಂದರು.

ಇದೇ ವೇಳೆ ನಟ ವಿಜಯ್ ಅಭಿಮಾನಿಗಳಾದ ಗಂಗಾಧರ್ ಬಸವೇಗೌಡ ಮಹೇಶ್, ಚೇತನ್, ವಿಶ್ವ ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

15 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

16 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

17 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

18 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

18 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

19 hours ago