ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್ ಹೈಕೋರ್ಟ್ ಇಂದು, ಮಧುರೈನ ತಿರುಪರಂಕುಂದ್ರಂ ಮೇಲಿನ ಕಲ್ಲಿನ ಕಂಬದಲ್ಲಿ ದೀಪ ಹಚ್ಚುವಂತೆ ನಿರ್ದೇಶಿಸಿದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಎತ್ತಿಹಿಡಿದಿದೆ.
ನ್ಯಾಯಾಲಯದ ಮುಂದಿದ್ದ ವಿಷಯವು ಹಗರತ್ ಸುಲ್ತಾನ್ ಸಿಕ್ಕಂದರ್ ಬಾದುಷಾ ಅವುಲಿಯಾ ದರ್ಗಾದ ಸಮೀಪವಿರುವ ತಿರುಪರಂಕುಂದ್ರಂ ಬೆಟ್ಟಗಳಲ್ಲಿರುವ ಪ್ರಾಚೀನ ಕಲ್ಲಿನ ದೀಪ ಕಂಬದಲ್ಲಿ ಕಾರ್ತಿಗೈ ದೀಪ ಬೆಳಗಿಸಬಹುದೇ ಎಂಬುದರ ಮೇಲೆ ಕೇಂದ್ರೀಕೃತವಾಗಿತ್ತು. ರಾಜ್ಯ ಹಾಗೂ ಇತರ ಮೇಲ್ಮನವಿದಾರರು ಪದ್ಧತಿ, ಕಾನೂನು ಸುವ್ಯವಸ್ಥೆ ಕಾಳಜಿಗಳು ಹಾಗೂ ಸ್ಥಳದ ಮೇಲಿನ ಸ್ಪರ್ಧಾತ್ಮಕ ಹಕ್ಕುಗಳನ್ನು ಉಲ್ಲೇಖಿಸಿ ಆಚರಣೆಯನ್ನು ವಿರೋಧಿಸಿದರು.
ರಾಜ್ಯದ ಅಕ್ಷೇಪಣೆಗಳನ್ನು ಬಲವಾಗಿ ಆಲಿಸಿದ ಪೀಠ, ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಮೇಲೆ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂದು ಹೇಳುವುದನ್ನು ಹಾಸ್ಯಾಸ್ಪದ ಹಾಗೂ ನಂಬಲು ಕಷ್ಟ ಎಂದು ಹೇಳಿತು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…