ಬೆಂಗಳೂರು : ನನ್ನ ಸಲುವಾಗಿ ಮದ್ವೆ ಡೇಟ್ ಬದಲಾವಣೆ ಮಾಡೋದು ಬೇಡ ಅಂತ ದರ್ಶನ್ ಹೇಳಿದ್ದಾರೆ ಎಂದು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರ್ದೇಶಕ ತರುಣ್ ಸುಧೀರ್, ಅವರೇನು ತಪ್ಪು ಮಾಡಿಲ್ಲ, ನ್ಯಾಯ ಸಯತ್ತದೆ ಎಂಬ ನಂಬಿಕೆ ಇದೆ. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು ರಿಕವರಿ ಆಗಿದ್ದಾರೆ. ನನ್ನ ಮತ್ತು ಸೋನಲ್ ವಿಚಾರ ಅವರಿಗೆ ಮೊದಲೆ ತಿಳಿದಿತ್ತು. ದರ್ಶನ್ ಅವರೇ ನಮ್ಮ ಮದುವೆ ಡೇಟ್ ಫಿಕ್ಸ್ ಮಾಡಿದ್ದು. ಅವರೇನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ. ನಮ್ಮನ್ನು ಹೆಚ್ಚಾಗಿ ಪ್ರೀತಿಸುವವರ ಮೇಲೆಯೇ ನಮಗೆ ನಂಬಿಕೆ ಹೆಚ್ಚಾಗಿರುತ್ತದೆ ಎಂದರು.
ಅಲ್ಲದೆ ನಮ್ಮ ಮದುವೆ ದಿನಾಂಕದ ಮುಂಚೆಯೇ ಅವರು ಹೊರಗೆ ಬರುತ್ತಾರೆ ಎನ್ನುವ ಭರವಸೆಯಿದೆ. ಅವರಿಗೆ ಮದುವೆ ಪತ್ರಿಕೆ ಏನು ಕೊಟ್ಟಿಲ್ಲ. ಅದಕ್ಕೆ ಜೈಲಿನಲ್ಲಿ ಅನುಮತಿ ಇಲ್ಲ. ಈಗ ದರ್ಶನ್ ಅವರ ಆಶೀರ್ವಾದ ಪಡೆದುಬಂದಿದ್ದೇನೆ ಎಂದು ಹೇಳಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…