ರಾಜ್ಯ

ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ವೇಣುಗೋಪಾಲ್- ಸುರ್ಜೇವಾಲಾಗೆ ಟಾಸ್ಕ್!

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.

2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ ಬ್ರೇಕ್ ಹಾಕಲು ಎಐಸಿಸಿ ಪ್ರಧಾನಕಾರ್ಯದರ್ಶಿನಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆ.ಸಿ ವೇಣುಗೋಪಾಲ್ ಅವರಿಗೆ ಟಾಸ್ಕ್ ನೀಡಿದೆ.

ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಹೇಳಿಕೆ ನೀಡಬಾರದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾರ್ನಿಂಗ್ ನೀಡಿದ್ದರೂ ರಾಜ್ಯ ಕಾಂಗ್ರೆಸ್ ನಾಯಕರು ಕೇರ್ ಮಾಡದೆ ಮತ್ತೆ ಅದೇ ವಿಷಯಗಳ ಬಗ್ಗೆ ಚರ್ಚೆ ಮುಂದುವರಿಸುತ್ತಿರುವುದರಿಂದ ಕೇಂದ್ರ ನಾಯಕರ ಮಧ್ಯ ಪ್ರವೇಶ ಅನಿವಾರ್ಯವಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯಕ್ಕೆ ಧಾವಿಸಿರುವ ರಣ್ ದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ.ಸಿ ವೇಣುಗೋಪಾಲ್ ಬುಧವಾರ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿದ್ದಾರೆ. ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಮನೆಯಲ್ಲಿ ಸಿದ್ದರಾಮಯ್ಯ ಅವರ  ಡಿನ್ನರ್ ಮೀಟಿಂಗ್ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ ಅನ್ನು ಚಿಂತೆಗೀಡು ಮಾಡಿದೆ. ಅಲ್ಲದೆ ಸಿಎಂ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿರುವ ಸತೀಶ್ ಜಾರಕಿಹೊಳಿ, ಸುಮಾರು 20 ಶಾಸಕರನ್ನು ಪ್ರವಾಸಕ್ಕೆ ಕರೆದೊಯ್ಯಲು ಮುಂದಾಗಿದ್ದರು. ಆದರೆ ಅದನ್ನು ವೇಣುಗೋಪಾಲ್ ಬ್ರೇಕ್ ಹಾಕಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದವರಾದರೂ ಯಾವುದೇ ಬಣಕ್ಕೆ ಒಲವು ತೋರಲು ಬಯಸದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸುವ ಜವಾಬ್ದಾರಿ ಸುರ್ಜೇವಾಲಾ ಮತ್ತು ವೇಣುಗೋಪಾಲ್‌ಗೆ ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾದ ಕೆ.ಎನ್.ರಾಜಣ್ಣ, ಮಹದೇವಪ್ಪ, ಜಮೀರ್ ಅಹಮದ್ ಖಾನ್ ಸೇರಿದಂತೆ ಸಿದ್ದರಾಮಯ್ಯ ಅವರಿಗೆ ನಿಷ್ಠರಾಗಿರುವ ಕೆಲ ನಾಯಕರು ಅಹಿಂದ ನಾಯಕ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಾವಧಿ ಪೂರ್ಣಗೊಳಿಸುವ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದಾರೆ.

ಆದರೆ ಶಾಸಕರಾದ ಬಸವರಾಜು ವಿ ಶಿವಗಂಗಾ, ರವಿಕುಮಾರ್ ಗೌಡ (ಗಾಣಿಗ) ಸೇರಿದಂತೆ ಶಿವಕುಮಾರ್ ಬೆಂಬಲಿಗರು ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಉಪಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.

ನಾನು ಸಿದ್ದರಾಮಯ್ಯ ಅವರ ಜೊತೆಗಿದ್ದೆ, ಮುಂದೆಯೂ ಅವರೊಂದಿಗಿದ್ದೇನೆ. ನಮ್ಮ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಬದಲಾವಣೆ ಮಾಡಬೇಕೇ  ಬೇಡವೆ ಎಂಬ ಬಗ್ಗೆ ನಿರ್ಧರಿಸುತ್ತಾರೆ ಎಂದು ಜಮೀರ್ ಅಹ್ಮದ್ ಖಾನ್ ಕೆಲವು ದಿನಗಳ ಹಿಂದೆಯಷ್ಟೇ ಹೇಳಿಕೆ ನೀಡಿದ್ದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago