ರಾಜ್ಯ

ಮತ ಚೋರಿ ತಡೆಗೆ ʻಕೈʼ ಕಾರ್ಯಪಡೆ : ರಾಜ್ಯದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ಬಿಡುವು ನೀಡಿದ್ದು, ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಮತ್ತು ರಸ್ತೆಗಳಿಗೆ ಡಾಂಬರೀಕರಣಗೊಳಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಉದ್ಯಾನವನಗಳ ನವೀಕರಣ, ಒಳಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮತ ಚೋರಿ ಪತ್ತೆಗೆ ಪಡೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿಯೂ ಮತಚೋರಿ ಆಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಜನರು ಕ್ಷೇತ್ರದಲ್ಲಿ ವಾಸ ಮಾಡದಿದ್ದರೂ ಬೆಂಗಳೂರು ಹೊರವಲಯದಿಂದ ಚುನಾವಣೆ ದಿನ ಬಂದು ಮತ ಚಲಾಯಿಸಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಮತ್ತು ವಿಧಾಸನಭೆ ಚುನಾವಣೆಯಲ್ಲಿ ಈ ಮತಚೋರಿ ಮರಕಳಿಸದಂತೆ ಎಚ್ಚರಿಕೆ ವಹಿಸಲು ಈಗಿನಿಂದಲೇ ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಕಾರ್ಯಪಡೆ ಕಾರ್ಯವ್ಯಾಪ್ತಿ ಇಡೀ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ ಗಳಿಗೆ ಕಾಂಗ್ರೆಸ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಕಾರ್ಯಪಡೆ ಇರಲಿದ್ದು, ಇವುಗಳ ಸದಸ್ಯರು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದಿಂದಲೇ ಖಚಿತ ಮತ ಪಟ್ಟಿಯನ್ನು ಪಡೆಯಲಿದ್ದಾರೆ. ಇದರ ಆಧಾರದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಮೂಲ ಮತದಾರರು ಆ ಮನೆಗಳಲ್ಲಿ ವಾಸಿಸುತ್ತಿದ್ದಾರೆಯೇ ಇಲ್ಲವೇ? ಎಂಬುದನ್ನು ಪತ್ತೆ ಮಾಡಲಿದ್ದಾರೆ.

ಆಯೋಗಕ್ಕೆ ಅನರ್ಹರ ಪಟ್ಟಿ ಹೀಗೆ ಪತ್ತೆ ಮಾಡಲಾದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಅನರ್ಹ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯನ್ನು ಸಕಾಲಕ್ಕೆ ಚುನಾವಣೆ ಆಯೋಗಕ್ಕೆ ಸಲ್ಲಿಸಿ ಅನರ್ಹರನ್ನು ಮತ ಪಟ್ಟಿಯಿಂದ ಕೈಬಿಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಸದ್ಯದಲ್ಲೇ ವಾರ್ಡ್ ಗಳಿಗೆ ಕಾರ್ಯಪಡೆಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇದು ಕೇವಲ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲ. ಮತದಾನ ಹಕ್ಕಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಪಡೆಯೂ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

1 hour ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

1 hour ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

1 hour ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

1 hour ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

1 hour ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

15 hours ago