ರಾಜ್ಯ

ಮತ ಚೋರಿ ತಡೆಗೆ ʻಕೈʼ ಕಾರ್ಯಪಡೆ : ರಾಜ್ಯದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ಬಿಡುವು ನೀಡಿದ್ದು, ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಮತ್ತು ರಸ್ತೆಗಳಿಗೆ ಡಾಂಬರೀಕರಣಗೊಳಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಉದ್ಯಾನವನಗಳ ನವೀಕರಣ, ಒಳಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮತ ಚೋರಿ ಪತ್ತೆಗೆ ಪಡೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿಯೂ ಮತಚೋರಿ ಆಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಜನರು ಕ್ಷೇತ್ರದಲ್ಲಿ ವಾಸ ಮಾಡದಿದ್ದರೂ ಬೆಂಗಳೂರು ಹೊರವಲಯದಿಂದ ಚುನಾವಣೆ ದಿನ ಬಂದು ಮತ ಚಲಾಯಿಸಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಮತ್ತು ವಿಧಾಸನಭೆ ಚುನಾವಣೆಯಲ್ಲಿ ಈ ಮತಚೋರಿ ಮರಕಳಿಸದಂತೆ ಎಚ್ಚರಿಕೆ ವಹಿಸಲು ಈಗಿನಿಂದಲೇ ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಕಾರ್ಯಪಡೆ ಕಾರ್ಯವ್ಯಾಪ್ತಿ ಇಡೀ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ ಗಳಿಗೆ ಕಾಂಗ್ರೆಸ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಕಾರ್ಯಪಡೆ ಇರಲಿದ್ದು, ಇವುಗಳ ಸದಸ್ಯರು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದಿಂದಲೇ ಖಚಿತ ಮತ ಪಟ್ಟಿಯನ್ನು ಪಡೆಯಲಿದ್ದಾರೆ. ಇದರ ಆಧಾರದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಮೂಲ ಮತದಾರರು ಆ ಮನೆಗಳಲ್ಲಿ ವಾಸಿಸುತ್ತಿದ್ದಾರೆಯೇ ಇಲ್ಲವೇ? ಎಂಬುದನ್ನು ಪತ್ತೆ ಮಾಡಲಿದ್ದಾರೆ.

ಆಯೋಗಕ್ಕೆ ಅನರ್ಹರ ಪಟ್ಟಿ ಹೀಗೆ ಪತ್ತೆ ಮಾಡಲಾದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಅನರ್ಹ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯನ್ನು ಸಕಾಲಕ್ಕೆ ಚುನಾವಣೆ ಆಯೋಗಕ್ಕೆ ಸಲ್ಲಿಸಿ ಅನರ್ಹರನ್ನು ಮತ ಪಟ್ಟಿಯಿಂದ ಕೈಬಿಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಸದ್ಯದಲ್ಲೇ ವಾರ್ಡ್ ಗಳಿಗೆ ಕಾರ್ಯಪಡೆಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇದು ಕೇವಲ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲ. ಮತದಾನ ಹಕ್ಕಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಪಡೆಯೂ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago