ರಾಜ್ಯ

ಮತ ಚೋರಿ ತಡೆಗೆ ʻಕೈʼ ಕಾರ್ಯಪಡೆ : ರಾಜ್ಯದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ಬಿಡುವು ನೀಡಿದ್ದು, ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಮತ್ತು ರಸ್ತೆಗಳಿಗೆ ಡಾಂಬರೀಕರಣಗೊಳಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಉದ್ಯಾನವನಗಳ ನವೀಕರಣ, ಒಳಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮತ ಚೋರಿ ಪತ್ತೆಗೆ ಪಡೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿಯೂ ಮತಚೋರಿ ಆಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಜನರು ಕ್ಷೇತ್ರದಲ್ಲಿ ವಾಸ ಮಾಡದಿದ್ದರೂ ಬೆಂಗಳೂರು ಹೊರವಲಯದಿಂದ ಚುನಾವಣೆ ದಿನ ಬಂದು ಮತ ಚಲಾಯಿಸಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಮತ್ತು ವಿಧಾಸನಭೆ ಚುನಾವಣೆಯಲ್ಲಿ ಈ ಮತಚೋರಿ ಮರಕಳಿಸದಂತೆ ಎಚ್ಚರಿಕೆ ವಹಿಸಲು ಈಗಿನಿಂದಲೇ ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಕಾರ್ಯಪಡೆ ಕಾರ್ಯವ್ಯಾಪ್ತಿ ಇಡೀ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ ಗಳಿಗೆ ಕಾಂಗ್ರೆಸ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಕಾರ್ಯಪಡೆ ಇರಲಿದ್ದು, ಇವುಗಳ ಸದಸ್ಯರು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದಿಂದಲೇ ಖಚಿತ ಮತ ಪಟ್ಟಿಯನ್ನು ಪಡೆಯಲಿದ್ದಾರೆ. ಇದರ ಆಧಾರದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಮೂಲ ಮತದಾರರು ಆ ಮನೆಗಳಲ್ಲಿ ವಾಸಿಸುತ್ತಿದ್ದಾರೆಯೇ ಇಲ್ಲವೇ? ಎಂಬುದನ್ನು ಪತ್ತೆ ಮಾಡಲಿದ್ದಾರೆ.

ಆಯೋಗಕ್ಕೆ ಅನರ್ಹರ ಪಟ್ಟಿ ಹೀಗೆ ಪತ್ತೆ ಮಾಡಲಾದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಅನರ್ಹ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯನ್ನು ಸಕಾಲಕ್ಕೆ ಚುನಾವಣೆ ಆಯೋಗಕ್ಕೆ ಸಲ್ಲಿಸಿ ಅನರ್ಹರನ್ನು ಮತ ಪಟ್ಟಿಯಿಂದ ಕೈಬಿಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಸದ್ಯದಲ್ಲೇ ವಾರ್ಡ್ ಗಳಿಗೆ ಕಾರ್ಯಪಡೆಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇದು ಕೇವಲ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲ. ಮತದಾನ ಹಕ್ಕಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಪಡೆಯೂ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

2 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

4 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago