ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿಯನ್ನು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ಅದಕ್ಕೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂದಮೇಲೆ ಈ ಹೋರಾಟ ಯಶಸ್ವಿಯಾಗಿದೆ ಎಂದೇ ಅರ್ಥ. ಬೆಂಗಳೂರಿನಲ್ಲಿ ಕಸಕ್ಕೆ, ಪಾರ್ಕಿಂಗ್ಗೆ ಶುಲ್ಕ ವಿಧಿಸಿದ್ದಾರೆ. ಇದು ತುಘಲಕ್ ದರ್ಬಾರ್ ಆಗಿದ್ದು, ಯಾರೂ ಕೇಳುವವರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀಲ್ಚೇರ್ನಲ್ಲಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಬೊಟ್ಟು ಇಟ್ಟುಕೊಂಡು ದೇವಸ್ಥಾನಗಳಲ್ಲಿ ಹೋಮ ಮಾಡಿಸುತ್ತಿದ್ದಾರೆ. ಬೊಟ್ಟು ಇಟ್ಟುಕೊಂಡು ಎಲ್ಲವನ್ನೂ ಮುಸ್ಲಿಮರಿಗೆ ಧಾರೆ ಎರೆಯುತ್ತಿದ್ದಾರೆ ಎಂದರು.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್ನವರು ತೆರಿಗೆಯ ದಾಳಿಯನ್ನು ಮಾಡುತ್ತಿದ್ದಾರೆ. ಮನು ಯಾರೆಂದೇ ನನಗೆ ಗೊತ್ತಿಲ್ಲದಿದ್ದರೂ ನಮ್ಮನ್ನು ಮನುವಾದಿ ಎಂದು ಕರೆಯುತ್ತಿದ್ದಾರೆ. ಇವರು ತುಘಲಕ್ನಂತೆಯೇ ಆಡಳಿತ ಮಾಡುತ್ತಿದ್ದು, ಇವರು ಕೂಡ ಅವರ ಕಡೆಯವರೇ? ಇವರೆಲ್ಲ ಷರಿಯಾ ಕಾನೂನನ್ನು ಜಾರಿ ಮಾಡಿದ್ದಾರೆ ಎಂದು ಟೀಕಿಸಿದರು.
ಇಲ್ಲಿ ಆಡಳಿತವನ್ನು ಯಾರೂ ನಡೆಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಟ ಮಾತ್ರ ನಡೆಯುತ್ತಿದೆ. ಈ ಹಿಂದೆ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ಮಾಡಿದ್ದಕ್ಕಾಗಿ ಸಚಿವರು ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಸೈಟುಗಳನ್ನು ವಾಪಸ್ ಕೊಟ್ಟರು. ಇವೆಲ್ಲ ನಮ್ಮ ಹೋರಾಟದ ಫಲವಾಗಿಯೇ ಆಗಿದೆ. ಈಗಲೂ ಹೋರಾಟ ಮಾಡಿ ಫಲಿತಾಂಶ ನೀಡುತ್ತೇವೆ ಎಂದರು.
ಭಾರತದ ಸಂಸತ್ತು ಯಾವತ್ತಿಗೂ ಶ್ರೇಷ್ಠವಾದುದು. ಇವರನ್ನು ಕೇಳಿ ಯಾರೂ ವಕ್ಫ್ ಕಾನೂನು ತರುವುದಿಲ್ಲ. ಹಿಂದೆ ಮನಮೋಹನ್ ಸಿಂಗ್ ಅವಧಿಯಲ್ಲಿ ತಂದ ಕಾನೂನಿನಿಂದಾಗಿ ಭೂಮಿ ಕಬಳಿಕೆಯಾಗಿದೆ. ವಕ್ಫ್ ತಿದ್ದುಪಡಿ ಕಾನೂನನ್ನು ಎಲ್ಲರೂ ಪಾಲಿಸಲೇಬೇಕು. ಕಾಂಗ್ರೆಸ್ನವರು 50 ಸಲ ಸಂವಿಧಾನ ಬದಲಿಸಿದ್ದಾರೆ. ಅವರಿಂದ ಬಿಜೆಪಿ ಬುದ್ಧಿ ಕಲಿಯಬೇಕಿಲ್ಲ ಎಂದರು.
ಹುಬ್ಬಳ್ಳಿಯಲ್ಲಿ ಅತ್ಯಾಚಾರ-ಕೊಲೆ ಮಾಡಿದ ವ್ಯಕ್ತಿ ಕಾನೂನು ರೀತಿಯಲ್ಲಿ ಎನ್ಕೌಂಟರ್ ಆಗಿರುವುದು ಉತ್ತಮ. ಇಂತಹ ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆಯಾಗಬೇಕು ಎಂದರು.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…