ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆ ದಾಳಿ : ಆರ್.ಅಶೋಕ

ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿಯನ್ನು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ಅದಕ್ಕೆ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂದಮೇಲೆ ಈ ಹೋರಾಟ ಯಶಸ್ವಿಯಾಗಿದೆ ಎಂದೇ ಅರ್ಥ. ಬೆಂಗಳೂರಿನಲ್ಲಿ ಕಸಕ್ಕೆ, ಪಾರ್ಕಿಂಗ್‌ಗೆ ಶುಲ್ಕ ವಿಧಿಸಿದ್ದಾರೆ. ಇದು ತುಘಲಕ್‌ ದರ್ಬಾರ್‌ ಆಗಿದ್ದು, ಯಾರೂ ಕೇಳುವವರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀಲ್‌ಚೇರ್‌ನಲ್ಲಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಬೊಟ್ಟು ಇಟ್ಟುಕೊಂಡು ದೇವಸ್ಥಾನಗಳಲ್ಲಿ ಹೋಮ ಮಾಡಿಸುತ್ತಿದ್ದಾರೆ. ಬೊಟ್ಟು ಇಟ್ಟುಕೊಂಡು ಎಲ್ಲವನ್ನೂ ಮುಸ್ಲಿಮರಿಗೆ ಧಾರೆ ಎರೆಯುತ್ತಿದ್ದಾರೆ ಎಂದರು.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ನವರು ತೆರಿಗೆಯ ದಾಳಿಯನ್ನು ಮಾಡುತ್ತಿದ್ದಾರೆ. ಮನು ಯಾರೆಂದೇ ನನಗೆ ಗೊತ್ತಿಲ್ಲದಿದ್ದರೂ ನಮ್ಮನ್ನು ಮನುವಾದಿ ಎಂದು ಕರೆಯುತ್ತಿದ್ದಾರೆ. ಇವರು ತುಘಲಕ್‌ನಂತೆಯೇ ಆಡಳಿತ ಮಾಡುತ್ತಿದ್ದು, ಇವರು ಕೂಡ ಅವರ ಕಡೆಯವರೇ? ಇವರೆಲ್ಲ ಷರಿಯಾ ಕಾನೂನನ್ನು ಜಾರಿ ಮಾಡಿದ್ದಾರೆ ಎಂದು ಟೀಕಿಸಿದರು.

ಇಲ್ಲಿ ಆಡಳಿತವನ್ನು ಯಾರೂ ನಡೆಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಟ ಮಾತ್ರ ನಡೆಯುತ್ತಿದೆ. ಈ ಹಿಂದೆ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ಮಾಡಿದ್ದಕ್ಕಾಗಿ ಸಚಿವರು ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಸೈಟುಗಳನ್ನು ವಾಪಸ್‌ ಕೊಟ್ಟರು. ಇವೆಲ್ಲ ನಮ್ಮ ಹೋರಾಟದ ಫಲವಾಗಿಯೇ ಆಗಿದೆ. ಈಗಲೂ ಹೋರಾಟ ಮಾಡಿ ಫಲಿತಾಂಶ ನೀಡುತ್ತೇವೆ ಎಂದರು.

ಭಾರತದ ಸಂಸತ್ತು ಯಾವತ್ತಿಗೂ ಶ್ರೇಷ್ಠವಾದುದು. ಇವರನ್ನು ಕೇಳಿ ಯಾರೂ ವಕ್ಫ್‌ ಕಾನೂನು ತರುವುದಿಲ್ಲ. ಹಿಂದೆ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ತಂದ ಕಾನೂನಿನಿಂದಾಗಿ ಭೂಮಿ ಕಬಳಿಕೆಯಾಗಿದೆ. ವಕ್ಫ್‌ ತಿದ್ದುಪಡಿ ಕಾನೂನನ್ನು ಎಲ್ಲರೂ ಪಾಲಿಸಲೇಬೇಕು. ಕಾಂಗ್ರೆಸ್‌ನವರು 50 ಸಲ ಸಂವಿಧಾನ ಬದಲಿಸಿದ್ದಾರೆ. ಅವರಿಂದ ಬಿಜೆಪಿ ಬುದ್ಧಿ ಕಲಿಯಬೇಕಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಅತ್ಯಾಚಾರ-ಕೊಲೆ ಮಾಡಿದ ವ್ಯಕ್ತಿ ಕಾನೂನು ರೀತಿಯಲ್ಲಿ ಎನ್‌ಕೌಂಟರ್‌ ಆಗಿರುವುದು ಉತ್ತಮ. ಇಂತಹ ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆಯಾಗಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago