ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆ ದಾಳಿ : ಆರ್.ಅಶೋಕ

ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿಯನ್ನು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ಅದಕ್ಕೆ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂದಮೇಲೆ ಈ ಹೋರಾಟ ಯಶಸ್ವಿಯಾಗಿದೆ ಎಂದೇ ಅರ್ಥ. ಬೆಂಗಳೂರಿನಲ್ಲಿ ಕಸಕ್ಕೆ, ಪಾರ್ಕಿಂಗ್‌ಗೆ ಶುಲ್ಕ ವಿಧಿಸಿದ್ದಾರೆ. ಇದು ತುಘಲಕ್‌ ದರ್ಬಾರ್‌ ಆಗಿದ್ದು, ಯಾರೂ ಕೇಳುವವರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀಲ್‌ಚೇರ್‌ನಲ್ಲಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಬೊಟ್ಟು ಇಟ್ಟುಕೊಂಡು ದೇವಸ್ಥಾನಗಳಲ್ಲಿ ಹೋಮ ಮಾಡಿಸುತ್ತಿದ್ದಾರೆ. ಬೊಟ್ಟು ಇಟ್ಟುಕೊಂಡು ಎಲ್ಲವನ್ನೂ ಮುಸ್ಲಿಮರಿಗೆ ಧಾರೆ ಎರೆಯುತ್ತಿದ್ದಾರೆ ಎಂದರು.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ನವರು ತೆರಿಗೆಯ ದಾಳಿಯನ್ನು ಮಾಡುತ್ತಿದ್ದಾರೆ. ಮನು ಯಾರೆಂದೇ ನನಗೆ ಗೊತ್ತಿಲ್ಲದಿದ್ದರೂ ನಮ್ಮನ್ನು ಮನುವಾದಿ ಎಂದು ಕರೆಯುತ್ತಿದ್ದಾರೆ. ಇವರು ತುಘಲಕ್‌ನಂತೆಯೇ ಆಡಳಿತ ಮಾಡುತ್ತಿದ್ದು, ಇವರು ಕೂಡ ಅವರ ಕಡೆಯವರೇ? ಇವರೆಲ್ಲ ಷರಿಯಾ ಕಾನೂನನ್ನು ಜಾರಿ ಮಾಡಿದ್ದಾರೆ ಎಂದು ಟೀಕಿಸಿದರು.

ಇಲ್ಲಿ ಆಡಳಿತವನ್ನು ಯಾರೂ ನಡೆಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಟ ಮಾತ್ರ ನಡೆಯುತ್ತಿದೆ. ಈ ಹಿಂದೆ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ಮಾಡಿದ್ದಕ್ಕಾಗಿ ಸಚಿವರು ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಸೈಟುಗಳನ್ನು ವಾಪಸ್‌ ಕೊಟ್ಟರು. ಇವೆಲ್ಲ ನಮ್ಮ ಹೋರಾಟದ ಫಲವಾಗಿಯೇ ಆಗಿದೆ. ಈಗಲೂ ಹೋರಾಟ ಮಾಡಿ ಫಲಿತಾಂಶ ನೀಡುತ್ತೇವೆ ಎಂದರು.

ಭಾರತದ ಸಂಸತ್ತು ಯಾವತ್ತಿಗೂ ಶ್ರೇಷ್ಠವಾದುದು. ಇವರನ್ನು ಕೇಳಿ ಯಾರೂ ವಕ್ಫ್‌ ಕಾನೂನು ತರುವುದಿಲ್ಲ. ಹಿಂದೆ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ತಂದ ಕಾನೂನಿನಿಂದಾಗಿ ಭೂಮಿ ಕಬಳಿಕೆಯಾಗಿದೆ. ವಕ್ಫ್‌ ತಿದ್ದುಪಡಿ ಕಾನೂನನ್ನು ಎಲ್ಲರೂ ಪಾಲಿಸಲೇಬೇಕು. ಕಾಂಗ್ರೆಸ್‌ನವರು 50 ಸಲ ಸಂವಿಧಾನ ಬದಲಿಸಿದ್ದಾರೆ. ಅವರಿಂದ ಬಿಜೆಪಿ ಬುದ್ಧಿ ಕಲಿಯಬೇಕಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಅತ್ಯಾಚಾರ-ಕೊಲೆ ಮಾಡಿದ ವ್ಯಕ್ತಿ ಕಾನೂನು ರೀತಿಯಲ್ಲಿ ಎನ್‌ಕೌಂಟರ್‌ ಆಗಿರುವುದು ಉತ್ತಮ. ಇಂತಹ ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆಯಾಗಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

57 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago