ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ.
ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ ಜೊತೆಗೆ ಒಂದು ಮುಂಗಡ ಕಂತು ಸೇರಿದೆ. ಇದರಿಂದ ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿಯು ವೇಗಗೊಳಿಸಿಕೊಳ್ಳಲು ಸಹಾಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31.862 ಕೋಟಿ, ರಾಜಸ್ಥಾನಕ್ಕೆ ರೂ.10,737 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987ಕೋಟಿ, ಛತ್ತೀಸ್ಗಢಕ್ಕೆ ರೂ.6,070. ಗುಜಾರಾತ್ಗೆ ರೂ.6,117 ಕೋಟಿ, ಒಡಿಶಾಗೆ ರೂ.8,068 ಕೋಟಿ ನೀಡಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಾದ ಬಿಹಾರಕ್ಕೆ ರೂ.17,921 ಕೋಟಿ, ಮಹಾರಾಷ್ಟ್ರಕ್ಕೆ ರೂ.11,255ಕೋಟಿ, ಆಂಧ್ರಪ್ರದೇಶಕ್ಕೆ ರೂ.7,211ಕೋಟಿ ನೀಡಿದೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ಹಾಗೂ ಇತರೆ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮೊತ್ತ ಕಡಿಮೆ ಇದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಾದ ಕರ್ನಾಟಕಕ್ಕೆ ರೂ.6,498ಕೋಟಿ, ತೆಲಂಗಾಣಕ್ಕೆ 3,745 ಕೋಟಿ, ಹಿಮಾಚಲಪ್ರದೇಶಕ್ಕೆ 1,479 ಕೋಟಿ ಬಿಡುಗಡೆ ಮಾಡಲಾಗಿದೆ. ಟಿಎಂಸಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳಕ್ಕೆ ರೂ.13,404ಕೋಟಿ, ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡಿಗೆ ರೂ.7,268ಕೋಟಿ, ಕೇರಳಕ್ಕೆ ರೂ.3430ಕೋಟಿ ನೀಡಲಾಗಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…