ರಾಜ್ಯ

ತೆರಿಗೆ ಪಾಲು ಹಂಚಿಕೆ: ಬಿಜೆಪಿ ಮಿತ್ರ ಪಕ್ಷಗಳಿಗೆ ಸಿಂಹಪಾಲು

ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ.

ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ ಜೊತೆಗೆ ಒಂದು ಮುಂಗಡ ಕಂತು ಸೇರಿದೆ. ಇದರಿಂದ ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿಯು ವೇಗಗೊಳಿಸಿಕೊಳ್ಳಲು ಸಹಾಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31.862 ಕೋಟಿ, ರಾಜಸ್ಥಾನಕ್ಕೆ ರೂ.10,737 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987ಕೋಟಿ, ಛತ್ತೀಸ್‌ಗಢಕ್ಕೆ ರೂ.6,070. ಗುಜಾರಾತ್‌ಗೆ ರೂ.6,117 ಕೋಟಿ, ಒಡಿಶಾಗೆ ರೂ.8,068 ಕೋಟಿ ನೀಡಲಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಾದ ಬಿಹಾರಕ್ಕೆ ರೂ.17,921 ಕೋಟಿ, ಮಹಾರಾಷ್ಟ್ರಕ್ಕೆ ರೂ.11,255ಕೋಟಿ, ಆಂಧ್ರಪ್ರದೇಶಕ್ಕೆ ರೂ.7,211ಕೋಟಿ ನೀಡಿದೆ. ಆದರೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಹಾಗೂ ಇತರೆ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮೊತ್ತ ಕಡಿಮೆ ಇದೆ.

ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಾದ ಕರ್ನಾಟಕಕ್ಕೆ ರೂ.6,498ಕೋಟಿ, ತೆಲಂಗಾಣಕ್ಕೆ 3,745 ಕೋಟಿ, ಹಿಮಾಚಲಪ್ರದೇಶಕ್ಕೆ 1,479 ಕೋಟಿ ಬಿಡುಗಡೆ ಮಾಡಲಾಗಿದೆ. ಟಿಎಂಸಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳಕ್ಕೆ ರೂ.13,404ಕೋಟಿ, ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡಿಗೆ ರೂ.7,268ಕೋಟಿ, ಕೇರಳಕ್ಕೆ ರೂ.3430ಕೋಟಿ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago