ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ.
ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ ಜೊತೆಗೆ ಒಂದು ಮುಂಗಡ ಕಂತು ಸೇರಿದೆ. ಇದರಿಂದ ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿಯು ವೇಗಗೊಳಿಸಿಕೊಳ್ಳಲು ಸಹಾಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31.862 ಕೋಟಿ, ರಾಜಸ್ಥಾನಕ್ಕೆ ರೂ.10,737 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987ಕೋಟಿ, ಛತ್ತೀಸ್ಗಢಕ್ಕೆ ರೂ.6,070. ಗುಜಾರಾತ್ಗೆ ರೂ.6,117 ಕೋಟಿ, ಒಡಿಶಾಗೆ ರೂ.8,068 ಕೋಟಿ ನೀಡಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಾದ ಬಿಹಾರಕ್ಕೆ ರೂ.17,921 ಕೋಟಿ, ಮಹಾರಾಷ್ಟ್ರಕ್ಕೆ ರೂ.11,255ಕೋಟಿ, ಆಂಧ್ರಪ್ರದೇಶಕ್ಕೆ ರೂ.7,211ಕೋಟಿ ನೀಡಿದೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ಹಾಗೂ ಇತರೆ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮೊತ್ತ ಕಡಿಮೆ ಇದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಾದ ಕರ್ನಾಟಕಕ್ಕೆ ರೂ.6,498ಕೋಟಿ, ತೆಲಂಗಾಣಕ್ಕೆ 3,745 ಕೋಟಿ, ಹಿಮಾಚಲಪ್ರದೇಶಕ್ಕೆ 1,479 ಕೋಟಿ ಬಿಡುಗಡೆ ಮಾಡಲಾಗಿದೆ. ಟಿಎಂಸಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳಕ್ಕೆ ರೂ.13,404ಕೋಟಿ, ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡಿಗೆ ರೂ.7,268ಕೋಟಿ, ಕೇರಳಕ್ಕೆ ರೂ.3430ಕೋಟಿ ನೀಡಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…