ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.
ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ ಟಿಬಿ ಬೋರ್ಡ್ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್ ಅಳವಡಿಕೆಯಾಗಲಿ ಎಂದು ಗುರುರಾಜ ಆಚಾರ್ಯ, ವಾದಿರಾಜ ಆಚಾರ್ಯರ ನೇತೃತ್ವದಲಲಿ ಮಹಾ ಸುದರ್ಶನ ಹೋಮ ಹಾಗೂ ರಕ್ಷಾ ಹೋಮದ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು.
ಇದನ್ನು ಓದಿ: ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ
ಪೂಜೆಯ ಬಳಿಕ ಆರಂಭದಲ್ಲಿ ಗ್ಯಾಸ್ ಕಟ್ಟರ್ ಮೂಲಕ ಕ್ರಸ್ಟ್ ಗೇಟ್ ಕಟ್ಟಿಂಗ್ ಮಾಡಿ ಮೇಲೆತ್ತಲು ಚಾಲನೆ ನೀಡಲಾಯಿತು.
105 ಟಿಎಂಸಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯಕ್ಕೆ 75 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿನ ನೀರನ್ನು 40 ಟಿಎಂಸಿಗೆ ಇಳಿಸಿ ಗೇಟ್ ಅಳವಡಿಸಲು ಟಿಬಿ ಬೋರ್ಡ್ ಅಧಿಕಾರಿಗಳು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಬೇಸಿಗೆ ಮುಕ್ತಾಯದ ವೇಳೆಗೆ ಎಲ್ಲಾ ಗೇಟ್ ಅಳವಡಿಸುತ್ತೇವೆ ಎಂದು ಡ್ಯಾಂನ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…