ರಾಜ್ಯ

ಚಹಾ ಪ್ರಿಯರಿಗೆ ಬಿಗ್‌ ಶಾಕ್:‌ ಬ್ಯಾನ್‌ ಆಗಲಿದೆ ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ

ಬೆಂಗಳೂರು: ಬಣ್ಣದ ಕಾಟನ್‌ ಕ್ಯಾಂಡಿ, ಕಬಾಬ್‌ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್‌ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆಯಾಗಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿಯನ್ನು ಬ್ಯಾನ್‌ ಮಾಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್‌ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ. ಇತೀಚೆಗೆ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿ ಸೇರಿದಂತೆ ನಾನ್‌ವೆಜ್‌ ಪ್ರಿಯರ ಕಬಾಬ್‌ ಮತ್ತು ಹೆಣ್ಣುಮಕ್ಕಳ ಹಾಟ್‌ ಫೆವರೇಟ್‌ ಪಾನಿಪುರಿ ಬ್ಯಾನ್‌ ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ ಟೀಗೆ ಕುತ್ತು ಬಂದಿದ್ದು, ಚಹಾ ಪ್ರಿಯರಿಗೆ ಬಿಗ್‌ ಶಾಕ್‌ ಆಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಟೀ ಪುಡಿ ಮಾದರಿ ಸಂಗ್ರಹಿಸಲಾಗಿತ್ತು. ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ ೪೯ ಟೀ ಪುಡಿ ಸ್ಯಾಂಪಲ್ಸ್‌ ಪೈಕಿ ೪೫ ಟೀ ಪುಡಿ ಸ್ಯಾಂಪಲ್ಸ್‌ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ಪರಿಶೀಲನೆ ವೇಳೆ ಟೀ ಪೌಡರ್‌ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಪ್ರಮುಖವಾಗಿ ಚಹಾದ ಪೌಡರ್‌ ಕಲರ್‌ ಹೆಚ್ಚಿಸಲು ಟೀ ಬಣ್ಣ ಬರಲು ಕೆಮಿಕಲ್‌ ಬಣ್ಣಗಳ ಬಳಕೆ ಮಾಡಲಾಗುತ್ತಿದೆ ಎಂಬ ಭಯಾನಕ ಅಂಶ ಪತ್ತೆ ಆಗಿದೆ.

ರಸ್ತೆ ಬದಿಯ ಕೆಲವು ಚಹಾದ ಅಂಗಡಿಗಳಲ್ಲಿ ತೂಕ ಹೆಚ್ಚಿಸಲು ಟೀ ಪುಡಿಯಲ್ಲಿ ಕೆಲವು ಮರದ ಪುಡಿ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದರಲ್ಲಿಯೂ ಕೂಡ ಕ್ಯಾನ್ಸರ್‌ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಟೀ ಪುಡಿಗೆ ಬಳಸುವ ಕ್ಯಾನ್ಸರ್‌ ಕಾರಕ ಅಂಶಗಳನ್ನು ಬ್ಯಾನ್‌ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧಾರ ಮಾಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಿರ್ಲೆ-ಭೇರ್ಯ-ಕೊಡಿಯಾಲ ರಸ್ತೆ ಅಭಿವೃದ್ಧಿ ಯಾವಾಗ?

ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…

1 second ago

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

23 hours ago