ರಾಜ್ಯ

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ ವಲಯ ತಿರುಗಿ ನೋಡುವಂತೆ ಮಾಡಿದೆ.

ಗದಗ ಜಿಲ್ಲೆಯ ಲಕ್ಕುಂಡಿ ಹಾಗೂ ಕಪ್ಪತಗುಡ್ಡದಲ್ಲಿ ಚಿನ್ನ ಹಾಗೂ ವಜ್ರವಢೂರ್ಯದಂತಹ ನಿಧಿಗಳು ಸಿಕ್ಕ ಬಳಿಕ ಇಂತಹ ಕೂತುಹಲಕಾರಿ ವಿಷಯಗಳು ಹೊರಬರುತ್ತಿದ್ದು, ರಾಜ್ಯದಲ್ಲಿ ಉತ್ಖನನಗಳು ಹೆಚ್ಚಿವೆ. ಇದೀಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೇಕಲಕೋಟೆಯ ಉತ್ಖನನ ವೇಳೆ ಗೌಡ್ರಮೂಲೆಯಲ್ಲಿ ಶಿಲಾಯುಗದ ಎರಡು ಅಸ್ಥಿ ಪಂಜರಗಳು ಸಿಕ್ಕಿವೆ.

ಉತ್ಖನನ ಗುಂಡಿಯಲ್ಲಿ ಸುಮಾರು 25 ವರ್ಷ ವಯಸ್ಸಿನವರು ಎಂದು ಅಂದಾಜಿಸಲಾದ ಇಬ್ಬರು ವ್ಯಕ್ತಿಗಳ ದೇಹದ ಮೇಲೆ ಕಲ್ಲು ಇರಿಸಿ ಅಂತ್ಯ ಸಂಸ್ಕಾರ ಮಾಡಿದ ರೀತಿಯಲ್ಲಿ ಅಸ್ಥಿ ಪಂಜರಗಳು ಕಂಡು ಬಂದಿವೆ. ಅವುಗಳ ಆಯಸ್ಸು ಸುಮಾರು ಐದು ಸಾವಿರ ವರ್ಷಗಳಷ್ಟಿರಬಹುದು ಎಂದು ಸಂಶೋಧಕರು ಮಾಹಿತಿ ನೀಡಿದ್ದಾರೆ.

ಅಮೆರಿಕಾದಿಂದ ಆಗಮಿಸಿರುವ ನಮಿತಾ ಎಸ್ ಸುಗಂಧಿ ಅವರ ನೇತೃತ್ವದಲ್ಲಿ ಮೂರು ತಂಡಗಳು ಬಳ್ಳಾರಿ ಸಿರಗುಪ್ಪದಲ್ಲಿ ಉತ್ಖನನ ನಡೆಸುತ್ತಿವೆ. ಈ ಬಗ್ಗೆ ಮಾಹಿತಿ ನೀಡಿರುವ ಉತ್ಖನನ ನಡೆಸುತ್ತಿರುವ ತಂಡದ ಸಹಾಯಕ ನಿರ್ದೇಶಕಿ ನಮಿತಾ, ಶಿಲಾಯುಗದಲ್ಲಿ ಬಳಸುತ್ತಿದ್ದ ಕಲ್ಲಿನ ಆಯುಧಗಳ ಮಾದರಿ ಸುಮಾರು ಒಂದು ಕೆಜಿಯಷ್ಟು ಸಂಗ್ರಹಯೋಗ್ಯ ವಸ್ತುಗಳು ದೊರೆತಿವೆ. ಅವುಗಳಲ್ಲಿ ಸಣ್ಣ ಸಣ್ಣ ಹರಿತವಾದ ಆಯುಧ ಮಾದರಿಯ ಈ ವಸ್ತುಗಳನ್ನು ಮತ್ತಷ್ಟು ಅಧ್ಯಯನ ನಡೆಸಬೇಕಾದ ಅಗತ್ಯತೆ ಇದೆ ಎಂದಿದ್ದಾರೆ.

ಬಹಳಷ್ಟು ಕಲ್ಲಿನ ಆಯುಸ್ಸು ಸುಮಾರು ಮೂರರಿಂದ ಐದು ಸಾವಿರ ವರ್ಷಗಳಷ್ಟಿರಬಹುದು. ಆ ಕಾಲದಲ್ಲಿ ಶವಸಂಸ್ಕಾರ ಪದ್ಧತಿ ಇರುವ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸಬೇಕಿದೆ. ಇದು ಮಾನವ ಜೀವ ವಿಕಾಸದ ಅಧ್ಯಯನಕ್ಕೆ ಮತ್ತಷ್ಟು ಪುಷ್ಠಿ ನೀಡಲಿದೆ ಎಂದು ಅವರು ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

55 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago