ರಾಜ್ಯ

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ ವಲಯ ತಿರುಗಿ ನೋಡುವಂತೆ ಮಾಡಿದೆ.

ಗದಗ ಜಿಲ್ಲೆಯ ಲಕ್ಕುಂಡಿ ಹಾಗೂ ಕಪ್ಪತಗುಡ್ಡದಲ್ಲಿ ಚಿನ್ನ ಹಾಗೂ ವಜ್ರವಢೂರ್ಯದಂತಹ ನಿಧಿಗಳು ಸಿಕ್ಕ ಬಳಿಕ ಇಂತಹ ಕೂತುಹಲಕಾರಿ ವಿಷಯಗಳು ಹೊರಬರುತ್ತಿದ್ದು, ರಾಜ್ಯದಲ್ಲಿ ಉತ್ಖನನಗಳು ಹೆಚ್ಚಿವೆ. ಇದೀಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೇಕಲಕೋಟೆಯ ಉತ್ಖನನ ವೇಳೆ ಗೌಡ್ರಮೂಲೆಯಲ್ಲಿ ಶಿಲಾಯುಗದ ಎರಡು ಅಸ್ಥಿ ಪಂಜರಗಳು ಸಿಕ್ಕಿವೆ.

ಉತ್ಖನನ ಗುಂಡಿಯಲ್ಲಿ ಸುಮಾರು 25 ವರ್ಷ ವಯಸ್ಸಿನವರು ಎಂದು ಅಂದಾಜಿಸಲಾದ ಇಬ್ಬರು ವ್ಯಕ್ತಿಗಳ ದೇಹದ ಮೇಲೆ ಕಲ್ಲು ಇರಿಸಿ ಅಂತ್ಯ ಸಂಸ್ಕಾರ ಮಾಡಿದ ರೀತಿಯಲ್ಲಿ ಅಸ್ಥಿ ಪಂಜರಗಳು ಕಂಡು ಬಂದಿವೆ. ಅವುಗಳ ಆಯಸ್ಸು ಸುಮಾರು ಐದು ಸಾವಿರ ವರ್ಷಗಳಷ್ಟಿರಬಹುದು ಎಂದು ಸಂಶೋಧಕರು ಮಾಹಿತಿ ನೀಡಿದ್ದಾರೆ.

ಅಮೆರಿಕಾದಿಂದ ಆಗಮಿಸಿರುವ ನಮಿತಾ ಎಸ್ ಸುಗಂಧಿ ಅವರ ನೇತೃತ್ವದಲ್ಲಿ ಮೂರು ತಂಡಗಳು ಬಳ್ಳಾರಿ ಸಿರಗುಪ್ಪದಲ್ಲಿ ಉತ್ಖನನ ನಡೆಸುತ್ತಿವೆ. ಈ ಬಗ್ಗೆ ಮಾಹಿತಿ ನೀಡಿರುವ ಉತ್ಖನನ ನಡೆಸುತ್ತಿರುವ ತಂಡದ ಸಹಾಯಕ ನಿರ್ದೇಶಕಿ ನಮಿತಾ, ಶಿಲಾಯುಗದಲ್ಲಿ ಬಳಸುತ್ತಿದ್ದ ಕಲ್ಲಿನ ಆಯುಧಗಳ ಮಾದರಿ ಸುಮಾರು ಒಂದು ಕೆಜಿಯಷ್ಟು ಸಂಗ್ರಹಯೋಗ್ಯ ವಸ್ತುಗಳು ದೊರೆತಿವೆ. ಅವುಗಳಲ್ಲಿ ಸಣ್ಣ ಸಣ್ಣ ಹರಿತವಾದ ಆಯುಧ ಮಾದರಿಯ ಈ ವಸ್ತುಗಳನ್ನು ಮತ್ತಷ್ಟು ಅಧ್ಯಯನ ನಡೆಸಬೇಕಾದ ಅಗತ್ಯತೆ ಇದೆ ಎಂದಿದ್ದಾರೆ.

ಬಹಳಷ್ಟು ಕಲ್ಲಿನ ಆಯುಸ್ಸು ಸುಮಾರು ಮೂರರಿಂದ ಐದು ಸಾವಿರ ವರ್ಷಗಳಷ್ಟಿರಬಹುದು. ಆ ಕಾಲದಲ್ಲಿ ಶವಸಂಸ್ಕಾರ ಪದ್ಧತಿ ಇರುವ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸಬೇಕಿದೆ. ಇದು ಮಾನವ ಜೀವ ವಿಕಾಸದ ಅಧ್ಯಯನಕ್ಕೆ ಮತ್ತಷ್ಟು ಪುಷ್ಠಿ ನೀಡಲಿದೆ ಎಂದು ಅವರು ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago