ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಪತ್ನಿ ಕಿರಕುಳಕ್ಕೆ ಬೇಸತ್ತು ಅತುಲ್ ಸುಭಾಷ್(34) ಎಂಬುವವರು ಡೆತ್ನೋಟ್ ಬರೆದಿಟ್ಟು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ಎ1 ಆರೋಪಿ ನಿಖಿತಾ ಸಿಂಘಾನಿಯಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ಅತ್ತೆ ಎ2 ನಿಶಾ ಸಿಂಘಾನಿಯಾ ಹಾಗೂ ಬಾಮೈದ ಎ3 ಅನುರಾಗ್ ಅವರನ್ನು ನಿನ್ನೆ ತಡರಾತ್ರಿ ಆರೆಸ್ಟ್ ಮಾಡುವಲ್ಲಿ ಯಶ್ವಸಿಯಾಗಿ ಬೆಂಗಳೂರಿಗೆ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅತುಲ್ ಸುಭಾಷ್ 15 ದಿನಗಳಿಂದ ಆತ್ಮಹತ್ಯೆಗೆ ಯೋಜಿಸಿದ್ದರು ಹಾಗೂ ಡೆತ್ನೋಟ್ ಬರೆದಿದ್ದರು ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಪತ್ನಿ ಹಾಗೂ ಸಂಬಂಧಿಕರಿಂದ ಕಿರಕುಳಕ್ಕೆ ಒಳಗಾಗಿದ್ದ ಅತುಲ್ ಅವರು ತಮ್ಮ ಆತ್ಮಹತ್ಯೆಗೆ ಮುನ್ನ 90 ನಿಮಿಷಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆತ್ಮಹತ್ಯೆಗೂ ಮುನ್ನ ಮೂರು ದಿನದ ಹಿಂದೆ ಡೆತ್ನೋಟ್ ಬರೆದಿಟ್ಟಿದ್ದರು. ಜೊತೆಗೆ ಕಾನೂನಿನ ವಿಚಾರಗಳ ಬಗ್ಗೆ ಗೂಗಲ್ನಲ್ಲಿ ಸರ್ಚ್ ಮಾಡಿದ್ದರು ಎಂದು ಪೊಲೀಸ್ ತನಿಖಾ ವರದಿಯಲ್ಲಿ ತಿಳಿದು ಬಂದಿದೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…