ರಾಜ್ಯ

ಟೆಕ್ಕಿ ಆತ್ಯಹತ್ಯೆ: ಅತುಲ್‌ ಸುಭಾಷ್‌ ಪತ್ನಿ, ಅತ್ತೆ ಹಾಗೂ ಬಾಮೈದ ಆರೆಸ್ಟ್‌

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಪತ್ನಿ ಕಿರಕುಳಕ್ಕೆ ಬೇಸತ್ತು ಅತುಲ್‌ ಸುಭಾಷ್‌(34) ಎಂಬುವವರು ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಮಂಜುನಾಥ ಲೇಔಟ್‌ನ ಪ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹರಿಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ಎ1 ಆರೋಪಿ ನಿಖಿತಾ ಸಿಂಘಾನಿಯಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ಅತ್ತೆ ಎ2 ನಿಶಾ ಸಿಂಘಾನಿಯಾ ಹಾಗೂ ಬಾಮೈದ ಎ3 ಅನುರಾಗ್‌ ಅವರನ್ನು ನಿನ್ನೆ ತಡರಾತ್ರಿ ಆರೆಸ್ಟ್‌ ಮಾಡುವಲ್ಲಿ ಯಶ್ವಸಿಯಾಗಿ ಬೆಂಗಳೂರಿಗೆ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅತುಲ್‌ ಸುಭಾಷ್‌ 15 ದಿನಗಳಿಂದ ಆತ್ಮಹತ್ಯೆಗೆ ಯೋಜಿಸಿದ್ದರು ಹಾಗೂ ಡೆತ್‌ನೋಟ್‌ ಬರೆದಿದ್ದರು ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಪತ್ನಿ ಹಾಗೂ ಸಂಬಂಧಿಕರಿಂದ ಕಿರಕುಳಕ್ಕೆ ಒಳಗಾಗಿದ್ದ ಅತುಲ್‌ ಅವರು ತಮ್ಮ ಆತ್ಮಹತ್ಯೆಗೆ ಮುನ್ನ 90 ನಿಮಿಷಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆತ್ಮಹತ್ಯೆಗೂ ಮುನ್ನ ಮೂರು ದಿನದ ಹಿಂದೆ ಡೆತ್ನೋಟ್‌ ಬರೆದಿಟ್ಟಿದ್ದರು. ಜೊತೆಗೆ ಕಾನೂನಿನ ವಿಚಾರಗಳ ಬಗ್ಗೆ ಗೂಗಲ್‌ನಲ್ಲಿ ಸರ್ಚ್‌ ಮಾಡಿದ್ದರು ಎಂದು ಪೊಲೀಸ್‌ ತನಿಖಾ ವರದಿಯಲ್ಲಿ ತಿಳಿದು ಬಂದಿದೆ.

ಅರ್ಚನ ಎಸ್‌ ಎಸ್

Recent Posts

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

44 mins ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

1 hour ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

2 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

5 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

7 hours ago