ರಾಜ್ಯ

ಕರ್ನಾಟಕದಲ್ಲಿ ತಾಪಮಾನ ಕುಸಿತ: ಮುಂದಿನ ಮೂರು ದಿನಗಳಲ್ಲಿ ಶೀತಗಾಳಿಯ ಎಚ್ಚರಿಕೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಳಿಗಾಲ ಪ್ರಾರಂಭವಾಗಿದ್ದು, ಮುಂದಿನ ಮೂರು ದಿನಗಳು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮತ್ತೊಮ್ಮೆ ತಾಪಮಾನದಲ್ಲಿ ಕುಸಿತ ಕಂಡಿದೆ.

ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕಡಿಮೆ ತಾಪಮಾನ ಕುಸಿತ ಕಂಡಿದೆ. ಅಲ್ಲದೇ ಮುಂದಿನ ಮೂರು ದಿನಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಆದರೆ ಈಗ ರಾಜ್ಯದಲ್ಲಿ ಕನಿಷ್ಠ ಉಷ್ಠಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗುವ ಸಾಧ್ಯತೆ ಇದೆ. ಜೊತೆಗೆ ರಾಜ್ಯಾದ್ಯಂತ ಅಧಿಕವಾಗಿ ಮಂಜು ಆವರಿಸಿಕೊಂಡು ಮುಸುಕಿನ ವಾತಾವರಣ ಮುಂದುವರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೇ ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿಯೂ ಶೀತಗಾಳಿಯ ವಾತವರಣ ಇರಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯಿಂದ ತಿಳಿಸಿದೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago