ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿ.ಸೆ. ನಷ್ಟು ಕಡಿಮೆಯಾಗಿದೆ. ಚಳಿಯ ತೀವ್ರತೆ ಹೆಚ್ಚಿದ್ದು, ಶೀತಗಾಳಿ ಬೀಸುತ್ತಿರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ಮಾಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಬೀದರ್‍ನಲ್ಲಿ 6.3 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ 21 ಜಿಲ್ಲಗಳಲ್ಲಿ ಕನಿಷ್ಠ ತಾಪಮಾನವು 10 ಡಿ.ಸೆ.ಗಿಂತ ಕಡಿಮೆ ದಾಖಲಾಗಿದೆ.

ಕರಾವಳಿ ಹೊರತುಪಡಿಸಿ ಉಳಿದ ಇತರೆ ಜಿಲ್ಲೆಗಳಲ್ಲೂ 15 ಡಿ.ಸೆ.ಗಿಂತ ಕಡಿಮೆ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರ 7.8 ಡಿ.ಸೆ., ತುಮಕೂರು 7.9 ಡಿ.ಸೆ., ಬೆಳಗಾವಿ 8.1 ಡಿ.ಸೆ., ಬಾಗಲಕೋಟೆ 8.3 ಡಿ.ಸೆ., ಚಿಕ್ಕಬಳ್ಳಾಪುರ 8.4 ಡಿ.ಸೆ., ವಿಜಯನಗರ 8.5 ಡಿ.ಸೆ., ಹಾಸನ 8.7 ಡಿ.ಸೆ., ಬೆಂಗಳೂರು ಗ್ರಾಮಾಂತರ 9 ಡಿ.ಸೆ., ಕಲಬುರಗಿ 9.1 ಡಿ.ಸೆ., ಬೆಂಗಳೂರು ನಗರ 9.2 ಡಿ.ಸೆ., ಗದಗ 9.3 ಡಿ.ಸೆ., ಕೊಪ್ಪಳ 9.4 ಡಿ.ಸೆ., ಚಿಕ್ಕಮಗಳೂರು, ಮಂಡ್ಯ, ಮೈಸೂರು 9.5 ಡಿ.ಸೆ., ಧಾರವಾಡ 9.6 ಡಿ.ಸೆ., ಚಾಮರಾಜನಗರ 9.7 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ರಾಜ್ಯಾದ್ಯಂತ ಒಣ ಹವೆ ಕಂಡುಬರುತ್ತಿದ್ದು, ಮುಂಜಾನೆ ಚಳಿ ಹೆಚ್ಚಾಗಿರಲಿದೆ. ಕೆಲವೆಡೆ ಮಂಜು ಮುಸುಕಿದ ವಾತಾವರಣ ಕಂಡುಬರುವುದು ಸಾಮಾನ್ಯವಾಗಿದೆ. ತಾಪಮಾನ ಕುಸಿತದಿಂದ ಹಾಗೂ ಆಗಾಗ್ಗೆ ಬೀಸುವ ಶೀತಗಾಳಿಯಿಂದಾಗಿ ಚಳಿಯು ಹೆಚ್ಚಿದೆ.

ಮಕರ ಸಂಕ್ರಾಂತಿ ಹಬ್ಬದವರೆಗೂ ಮಾಗಿಯ ಚಳಿಯ ತೀವ್ರತೆ ಹೆಚ್ಚೂಕಡಿಮೆ ಇದೇ ರೀತಿ ಕಂಡುಬರಲಿದೆ ಎಂದು ಹೇಳಿದೆ.

ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ.

ನಾಳೆಯಿಂದ ಜ.12 ರವರೆಗೆ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದ್ದು, ಸದ್ಯಕ್ಕೆ ಎಲ್ಲೂ ಭಾರೀ ಮಳೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago